Saturday, April 20, 2024
spot_imgspot_img
spot_imgspot_img

ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕ್ ನ ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಶ್ರೀಕಾಂತ್ ಬಳ್ಳಾಲ್ ಅಸ್ತಂಗತ

- Advertisement -G L Acharya panikkar
- Advertisement -

ವಿಟ್ಲ : ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನ ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಶ್ರೀಕಾಂತ್ ಬಳ್ಳಾಲ್(57) ರವರು ಅಲ್ಪಕಾಲದ ಅಸೌಖ್ಯದಿಂದಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಜು.21 ರಂದು ನಿಧನರಾದರು.

ಚಂದಳಿಕೆ ಸಮೀಪದ ಬದನಾಜೆ ನಿವಾಸಿಯಾಗಿದ್ದ ಶ್ರೀಕಾಂತ್ ಬಳ್ಳಾಲ್‌ರವರು ವಿಟ್ಲ, ಗ್ರಾಮೀಣ ಸಹಕಾರಿ ಬ್ಯಾಂಕ್ ನಲ್ಲಿ ದ್ವಿತೀಯ ದರ್ಜೆ ಗುಮಾಸ್ತನಾಗಿ ಕರ್ತವ್ಯ ಆರಂಭಿಸಿದ್ದು, ಬಳಿಕದ ದಿನಗಳಲ್ಲಿ ಪ್ರಥಮ ದರ್ಜೆ ಗುಮಾಸ್ತನಾಗಿ ಭಡ್ತಿ ಹೊಂದಿದರು. ನಂತರ ಶಾಖಾ ವ್ಯವಸ್ಥಾಪಕ ಹಾಗೂ ಮಾರಾಟ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ಲೆಕ್ಕಾಧಿಕಾರಿಯಾಗಿ ಕಾರ್ಯಾನಿರ್ವಹಿಸಿ, ಬಳಿಕ ಸಹಾಯಕ ಕಾರ್ಯ ನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಶ್ರೀಕಾಂತ್ ಬಳ್ಳಾಲ್ ರವರಿಗೆ ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರು ಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತಾದರೂ ಜು.21ರಂದು ಅವರು ನಿಧನರಾದರು. ಮೃತರು ಪತ್ನಿ ಹಾಗೂ ಓರ್ವ ಮಗನನ್ನು ಅಗಲಿದ್ದಾರೆ.

driving
- Advertisement -

Related news

error: Content is protected !!