- Advertisement -
- Advertisement -
ವಿಟ್ಲ: ವಿಟ್ಲ ಕಸಬಾ ಗ್ರಾಮದ ಆಲಂಗಾರು ನಿವಾಸಿ ರಘುನಾಥ ಎಂಬವರ ತಂದೆ ಬೆಳ್ಯಪ್ಪಗೌಡ(68) ಎಂಬವರು ಸುಮಾರು 15 ವರ್ಷಗಳಿಂದ ಅಮಲು ಪದಾರ್ಥ ಸೇವಿಸುವ ಚಟವನ್ನು ಹೊಂದಿದ್ದು.
ಇತ್ತೀಚಿನ ದಿನಗಳಲ್ಲಿ ವಿಪರೀತ ಅಮಲು ಪದಾರ್ಥ ಸೇವಿಸುವ ಅಭ್ಯಾಸವನ್ನು ರೂಢಿಸಿಕೊಂಡಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡಿದ್ದವರು ಫೆ.19 ರಂದು ರಾತ್ರಿ ತಮ್ಮ ಮನೆಯ ಬಳಿಯ ಕೊಟ್ಟಿಗೆಯಲ್ಲಿ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.
ಅಸ್ವಸ್ಥಗೊಂಡ ಬೆಳ್ಯಪ್ಪಗೌಡ ಅವರನ್ನು ಚಿಕಿತ್ಸೆಗಾಗಿ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಿದ್ದರು. ಫೆ.27 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುತ್ತಾರೆ. ಅವರ ಸಾವಿನ ಬಗ್ಗೆ ಯಾವುದೇ ಸಂಶಯವಿಲ್ಲವೆಂದು ವರದಿಯಾಗಿದೆ.
- Advertisement -