Monday, April 29, 2024
spot_imgspot_img
spot_imgspot_img

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ – ಸಾಧಕರಿಗೆ ಸನ್ಮಾನ ಕಾರ್ಯಕ್ರಮ

- Advertisement -G L Acharya panikkar
- Advertisement -

ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ದ. ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಇದರ ಸಹಕಾರದೊಂದಿಗೆ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ವಿಟ್ಲ ಲಯನ್ಸ್ ಕ್ಲಬ್ ನ ಅಧ್ಯಕ್ಷ ಹಾಗೂ ಕೃಷಿಕ Ln ಸುದೇಶ್ ಭಂಡಾರಿ ಇವರು ದೀಪ ಪ್ರಜ್ವಲನ ಮಾಡುವ ಮೂಲಕ ಉದ್ಘಾಟನೆ ಮಾಡಿದರು.

ಸಂಜೆ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲದ ಉದ್ಯಮಿ ಹಾಗೂ ದೇವತಾ ಸಮಿತಿ ವಿಟ್ಲ ಇದರ ಅಧ್ಯಕ್ಷ ರಾಧಾಕೃಷ್ಣ ನಾಯಕ್ ವಹಿಸಿದ್ದರು. ಈ ವೇಳೆ ಮೈತ್ರೆಯಿ ಗುರುಕುಲದ ವ್ಯವಸ್ಥಾಪಕ ಜಗನ್ನಾಥ ಕಾಸರಗೋಡು, ರಾಮದಾಸ ಶೆಣೈ , ವಿಟಿವಿ ನಿರ್ದೇಶಕ ರಾಮದಾಸ್ ಶೆಟ್ಟಿ, ರಮೇಶ್ ವರಪ್ಪಾದೆ, ಅಬಕಾರಿ ಇಲಾಖೆಯ ಅಧಿಕಾರಿ ನವೀನ್ ಕುಮಾರ್‍ ಬೆಳ್ತಂಗಡಿ, ಸ್ವಸ್ತಿಕ್ ಫ್ರೆಂಡ್ಸ್ ಇದರ ಅಧ್ಯಕ್ಷ ತಾರನಾಥ ವಿಟ್ಲ, ವಿಶ್ರಾಂತ ಉಪಪ್ರಾಂಶುಪಾಲ H ಸುಬ್ರಮಣ್ಯ ಭಟ್, ಉದ್ಯಮಿ ಜಗದೀಶ ಪಾಣೆಮಜಲ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಕಣಚ್ಚೂರು ವೈದ್ಯಕೀಯ ಕಾಲೇಜಿನ ವೈದ್ಯ ಡಾ. ಕಿರಣ್ ಮತ್ತು ವಿಟ್ಲ ಪೊಲೀಸ್ ಠಾಣೆಯ HC ಹಾಗೂ ಕಬಡ್ಡಿ ಆಟಗಾರ ಡ್ಯಾನಿ ಮಡಂತ್ಯಾರು ಇವರಿಗೆ ಗೌರವ ಸಮರ್ಪಣೆ ನಡೆಯಿತು. ಆಹ್ವಾನಿತ 16 ತಂಡಗಳು ಇದರಲ್ಲಿ ಭಾಗಿಯಾಗಿದ್ದವು.

- Advertisement -

Related news

error: Content is protected !!