Saturday, April 20, 2024
spot_imgspot_img
spot_imgspot_img

ವಿಟ್ಲ: ಟಿಪ್ಪರ್, ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ!

- Advertisement -G L Acharya panikkar
- Advertisement -

ವಿಟ್ಲ: ಟಿಪ್ಪರ್, ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಕಲ್ಲಡ್ಕ – ಕಾಂಞಂಗಾಡು ಹೆದ್ದಾರಿಯ ಉಕ್ಕುಡ – ಅಪ್ಪೆರಿಪಾದೆ ಮಧ್ಯೆ ನಡೆದಿದೆ. ದ್ವಿಚಕ್ರ ವಾಹನ ಸವಾರ ಮುಳಿಯ ತಾಳಿಪಡ್ಪು ನಿವಾಸಿ ರತ್ನಾಕರ ಶೆಟ್ಟಿ (43) ಗಾಯಾಳು.

ಪೆರ್ಲ ಕಡೆಯಿಂದ ವಿಟ್ಲಕ್ಕೆ ಹೋಗುತ್ತಿದ್ದ ಬೆಲೆನೊ ಕಾರೊಂದು ಟಿಪ್ಪರ್ ಅನ್ನು ಹಿಂದಿಕ್ಕಲು ಹೋದ ಸಂದರ್ಭದಲ್ಲಿ ಮುಂಭಾಗದಿಂದ ರತ್ನಾಕರ ಶೆಟ್ಟಿ ಅವರು ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದಿದ್ದಾರೆ.
ದ್ವಿಚಕ್ರಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಕಾರು ಟಿಪ್ಪರ್ ಗೆ ಡಿಕ್ಕಿಯಾಗಿ ದ್ಚಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ರಸ್ತೆಯ ಬಲಭಾಗದ ಮಣ್ಣಿನ ದಿಬ್ಬದ ಮೇಲೆ ಉರುಳಿ ಬಿದ್ದಿದೆ.

- Advertisement -

Related news

error: Content is protected !!