Thursday, March 28, 2024
spot_imgspot_img
spot_imgspot_img

ಸೂರಿಕುಮೇರು ಟ್ಯಾಂಕರ್ ಪಲ್ಟಿ- ಹೆದ್ದಾರಿ ಬಂದ್, ವಿಟ್ಲ ಟ್ರಾಫಿಕ್ ಜಾಮ್- ಪೊಲೀಸರಿಂದ ಟ್ರಾಫಿಕ್ ಕ್ಲಿಯರೆನ್ಸ್

- Advertisement -G L Acharya panikkar
- Advertisement -

ವಿಟ್ಲ: ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದು ರಸ್ತೆ ಉರುಳಿದೆ. ಇದರಿಂದ ಅನಿಲ ಸೋರಿಕೆ ಉಂಟಾಗುವ ಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಇದರಿಂದಾಗಿ ಎಲ್ಲಾ ವಾಹನಗಳು ಕಬಕ-ವಿಟ್ಲ-ಕಲ್ಲಡ್ಕ ರಸ್ತೆಯಿಂದಾಗಿ ಸಂಚರಿಸುತ್ತಿರುವ ಕಾರಣ ವಿಟ್ಲದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆಯಾಗದಂತೆ ಪೊಲೀಸರು ಅಚ್ಚುಕಟ್ಟಾಗಿ ಟ್ರಾಫಿಕ್ ಕಂಟ್ರೋಲ್ ನ್ನು ನಿಭಾಯಿಸುತ್ತಿದ್ದಾರೆ. ಸುಮಾರು 12 ಗಂಟೆ ಹೊತ್ತಿಗೆ ಮಂಗಳೂರು ಬೆಂಗಳೂರು ಹೆದ್ದಾರಿ ಸಂಚಾರಕ್ಕೆ ಅನುವು ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!