Sunday, May 19, 2024
spot_imgspot_img
spot_imgspot_img

ವಿಟ್ಲ: ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಯುವತಿ ಮನೆಗೆ ಕೇಂದ್ರ ಸಚಿವ ಭಗವಂತ್‌ ಖೂಬಾ, ಸಂಸದ ಕಟೀಲ್ ಭೇಟಿ

- Advertisement -G L Acharya panikkar
- Advertisement -

ವಿಟ್ಲ: ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯ ಬಳಿ ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಅಳಿಕೆ ಗ್ರಾಮದ ಕುದ್ದುಪದವು ಆದಾಳ ನಿವಾಸಿ ಯುವತಿ ಗೌರಿ ಅವರ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಭಗವಂತ್‌ ಖೂಬಾ ಮತ್ತು ಸಂಸದ ನಳಿನ್‌ ಕುಮಾರ್ ಕಟೀಲ್ ಸಹಿತ ಬಿಜೆಪಿಯ ಮುಖಂಡರು ಭೇಟಿ ನೀಡಿ ಆಕೆಯ ಮನೆ ಮಂದಿಗೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು.

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಜಿಲ್ಲಾ ಕಾರ್ಯದರ್ಶಿ ರಂದಿಪ್, ವಿಟ್ಲ ಬಿಜೆಪಿ ಅಧ್ಯಕ್ಷ ಅರುಣ್ ವಿಟ್ಲ, ದಯಾನಂದ ಶೆಟ್ಟಿ ಬಿಜೆಪಿ ಪುಣಚ ಕಾರ್ಯದರ್ಶಿ ಸಹಿತ ಹಲವಾರು ಮಂದಿ ಜೊತೆಗಿದ್ದರು.

- Advertisement -

Related news

error: Content is protected !!