- Advertisement -
- Advertisement -
ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ರಸ್ತೆಯಲ್ಲಿ ಉರುಳಿದ ಘಟನೆ ವಿಟ್ಲ ಕೆಲಿಂಜ ಕೊಟ್ಟಾರಿ ಕಟ್ಟೆಯಲ್ಲಿ ನಡೆದಿದೆ.
ಕಲ್ಲಡ್ಕದಿಂದ ಪೆರ್ಲ ಕಡೆ ಸಾಗುತ್ತಿದ್ದ ಸಿಮೆಂಟ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿದ್ದು, ಚಾಲಕ ಲಾರಿಯೊಳಗೆ ಸಿಲುಕಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಲಾರಿಯೊಳಗೆ ಸಿಲುಕಿಕೊಂಡ ಚಾಲಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ. ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಸಿಮೆಂಟ್ ಚೀಲಗಳು ಚೆಲ್ಲಾಪಿಲ್ಲಿಯಾಗಿದೆ.
ಅಡ್ಡ ಬಂದ ನಾಯಿಯ ಪ್ರಾಣ ಉಳಿಸಲು ಹೋಗಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
- Advertisement -