ವಿಟ್ಲ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ) ಗುರುವಾಯನಕೆರೆ ಬೆಳ್ತಂಗಡಿ ತಾಲೂಕು ಇದರ ಸ್ಥಳಾಂತರಿತ 18 ನೇ ಶಾಖೆ ವಿಟ್ಲದ ಪಾರ್ಕ್ಲೈನ್ ಗ್ಯಾಲಿರಿಯ ಕಮರ್ಷಿಯಲ್ ಕಾಂಪ್ಲೆಕ್ಸ್ನ 1 ನೇ ಮಹಡಿಯಲ್ಲಿ ಶುಭಾರಂಭಗೊಂಡಿತು.
ಪರಮಪೂಜ್ಯ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ದೀಪ ಪ್ರಜ್ವಲಿಸಿ ನೂತನ ಶಾಖೆಗೆ ಶುಭಹಾರೈಸಿದ್ರು.
ಶಾಖಾ ಕಛೇರಿಯನ್ನು ವಿಟ್ಲ ಶ್ರೀಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಂಗಾರು ಅರಸರು ವಿಟ್ಲ ಅರಮನೆ ಉದ್ಘಾಟಿಸಿ ಶಾಖೆಗೆ ಶುಭಹಾರೈಸಿದರು. ಭದ್ರತಾ ಕೊಠಡಿ ಉದ್ಘಾಟನೆಯನ್ನು ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಧಕೃಷ್ಣ ಚೆಲ್ಲಡ್ಕ ಹಾಗೂ ಗಣಕಯಂತ್ರದ ಉದ್ಘಾಟನೆಯನ್ನು ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಬೀಡಿನಮಜಲು ಉದ್ಘಾಟಿಸಿ ಶಾಖೆಯ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಶುಭಹಾರೈಸಿದರು.
ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಅಧ್ಯಕ್ಷರಾದ ಎಸ್.ಜಯರಾಮ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೊಳ್ನಾಡು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್ ಮಹಮ್ಮದ್, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಜಯಂತ ಸಿ.ಎಚ್, ಡಾ. ಶರಶ್ಚಂದ್ರ ಶೆಟ್ಟಿ, ಗ್ರಾಮಾಂತರ ಸಾರ್ವಜನಿಕ ಸಂಪರ್ಕ ಅಧಿಕಾರಿ ಲಯನ್ಸ್ ಜಿಲ್ಲೆ 317- ಡಿ, ಚರ್ಚ್ ಪಾಲನಾ ಮಂಡಳಿ, ಶೋಕ ಮಾತಾ ಇಗರ್ಜಿ ವಿಟ್ಲದ ಉಪಾಧ್ಯಕ್ಷ ಮನೋಹರ್ ಲ್ಯಾನ್ಸಿ ಡಿಸೋಜ, ವ್ಯವಸಾಯ ಸೇವಾ ಸಹಕಾರಿ ಸಂಘ ವಿಟ್ಲದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಪಾರ್ಕ್ ಲೈನ್ ಗ್ಯಾಲರಿಯ ಕಮರ್ಷಿಯಲ್ ಕಾಂಪ್ಲೆಕ್ಸ್ನ ಮಾಲಕ ಆರ್.ಕೆ ಅಬ್ದುಲ್ಲಾ ಇವರೆಲ್ಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರುಗಳಾದ ಸೀತಾರಾಮ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಕೃಷ್ಣ ರೈ, ರಘುರಾಮ ಶೆಟ್ಟಿ ಪುರಂದರ ಶೆಟ್ಟಿ, ಜಯರಾಮ ಭಂಡಾರಿ, ಮಂಜುನಾಥ ರೈ ಸೇರಿದಂತೆ ಹಲವು ಜನರು ಉಪಸ್ಥಿತರಿದ್ದರು.