- Advertisement -
- Advertisement -
ಕರಾವಳಿಯಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ವಿಟ್ಲ-ಮಂಗಳೂರು ಪ್ರಮುಖ ರಸ್ತೆಯ ಬೊಬ್ಬೆಕೇರಿ ಬಳಿ ನೆರೆ ನೀರು ರಸ್ತೆಯಲ್ಲಿ ಹರಿದು ವಾಹನ ಸವಾರರು, ಪಾದಚಾರಿಗಳು, ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಇಂದು ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ವಿಟ್ಲದ ಹಲವು ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿದ್ದು, ವಿಟ್ಲ-ಮಂಗಳೂರು ರಸ್ತೆಯಲ್ಲಿ ಮಳೆ ನೀರು ಹಾಗೂ ಚರಂಡಿ ಒಟ್ಟಾಗಿ ಹರಿದು ರಸ್ತೆ ಜಲಾವೃತಗೊಂಡು ಹೊಳೆಯಂತೆ ಕಾಣುತ್ತಿದೆ. ಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಹಲವು ಬಾರಿ ಪಿಡಬ್ಲ್ಯೂಡಿ ಗುತ್ತಿಗೆದಾರರಿಗೆ ಮನವಿ ಮಾಡಿದರು, ಸ್ಪಂದಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸಂಬಂಧ ಪಟ್ಟವರು ಎಚ್ಚೆತ್ತುಕೊಳ್ಳದೇ ಇಂತಹ ಸ್ಥಿತಿ ಎದುರಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -