- Advertisement -
- Advertisement -
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಕಾರ ಮಳೆ ಸುರಿಯುತ್ತಿದ್ದು, ವಿಟ್ಲ ಪರಿಸರದಲ್ಲಿ ತಾಸುಗಟ್ಟಲೆ ಕಾಲ ಸುರಿದ ಮಳೆಗೆ ನೆರೆ ನೀರು ರಸ್ತೆಯಲ್ಲಿ ಹರಿದು ವಾಹನ ಸವಾರರು, ಪಾದಚಾರಿಗಳು ತೊಂದರೆ ಅನುಭವಿಸಿದ್ದಾರೆ.
ಇಂದು ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ವಿಟ್ಲದ ಹಲವು ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿದ್ದು, ಇದರಿಂದ ವಾಹನ ಸವಾರರು, ಪಾದಾಚಾರಿಗಳು ಪರದಾಡುವ ಸ್ಥಿತಿ ಎದುರಾಗಿದೆ.
ವಿಟ್ಲ-ಮಂಗಳೂರು ಪ್ರಮುಖ ರಸ್ತೆಯಲ್ಲಿ ಮಳೆ ನೀರು ಹಾಗೂ ಚರಂಡಿ ಒಟ್ಟಾಗಿ ಹರಿದು ರಸ್ತೆ ಜಲಾವೃತಗೊಂಡು ಹೊಳೆಯಂತೆ ಕಾಣುತ್ತಿದೆ. ಚರಂಡಿ ವ್ಯವಸ್ಥೆ ಮಾಡದ ಪರಿಣಾಮ ಮಳೆ ನೀರು ಹರಿಯಲು ಸಾಧ್ಯವಾಗದೇ ಈ ಇಂತಹ ಸ್ಥಿತಿ ಎದುರಾಗಿದೆ ಎಂದು ಸ್ಥಳೀಯರ ಆರೋಪಿಸಿ ಈ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -