- Advertisement -
- Advertisement -
ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ಕಿಟಕಿಗೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಸಿಬ್ಬಂದಿಗಳು ಕಛೇರಿಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾರೋ ಕಿಡಿಗೇಡಿಗಳು ಕಛೇರಿಯ ಮುಂಭಾಗದ ಗಾಜಿನ ಕಿಟಕಿಗೆ ಕಲ್ಲನ್ನು ಎಸೆದಿದ್ದಾರೆ. ಇದರಿಂದ ಗಾಜಿನ ಕಿಟಕಿ ಪುಡಿಪುಡಿಯಾಗಿದೆ.
ಈ ಕಛೇರಿಯ ಹತ್ತಿರದಲ್ಲೇ ಪೊಲೀಸ್ ಕ್ವಾಟರ್ಸ್ ಇದೆ. ಈ ಘಟನೆಯಿಂದ ಸಾರ್ವಜನಿಕ ವಲಯದಲ್ಲಿ ಆತಂಕ ಮತ್ತು ಪ್ರಶ್ನೆ ಸೃಷ್ಟಿಯಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -