Thursday, May 16, 2024
spot_imgspot_img
spot_imgspot_img

ವಿಟ್ಲ: ಹಳೆ ದ್ವೇಷದ ಹಿನ್ನಲೆ ಯುವಕನ ಮೇಲೆ ನಾಲ್ವರಿಂದ ಹಲ್ಲೆ, ಚೂರಿ ಇರಿದು ಜೀವ ಬೆದರಿಕೆ

- Advertisement -G L Acharya panikkar
- Advertisement -

ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಕಾಡುಮಠ ನಿವಾಸಿಗಳಾದ ಅವಿನಾಶ್,. ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರೀಸ್ ದೂರು ನೀಡಿದ್ದಾರೆ. ಅಬ್ದುಲ್ ಹ್ಯಾರಿಸ್ ಅವರು ಸಾಲೆತ್ತೂರಿನಿಂದ ತನ್ನ ಮನೆಗೆ ಬೈಕ್ ನಲ್ಲಿ ಬರುತ್ತಿದ್ದಾಗ ಹಿಂದಿನಿಂದ ಬಂದ ತಂಡ ಬೈಕ್ ನಿಲ್ಲಿಸಿ ಹಾರೀಸ್ ಅವರ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಕೈಯಿಂದ ಹೊಡೆದು, ಬೈಕಿನಿಂದ ದೂಡಿಹಾಕಿದ್ದಾರೆ. ಬಳಿಕ ಅವಿನಾಶ್ ಎಂಬಾತ ಚೂರಿಯಿಂದ ಹಾರೀಸ್ ಅವರ ಬೆನ್ನಿಗೆ ಚುಚ್ಚಿದ್ದಾರೆ. ಬಳಿಕ ನೀನು ನಮ್ಮ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ತೆರಳಿದ್ದಾರೆ.

ಈ ಹಲ್ಲೆಗೆ ಕೆಲ ಸಮಯದ ಹಿಂದೆ ಅವಿನಾಶನ ತಂಗಿಗೆ ಕೀಟಲೆ ಮಾಡಿದ್ದಾನೆ ಎಂದು ಹಾರೀಸ್ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪೂರ್ವ ದ್ವೇಷದಿಂದ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!