ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟವು ಸೆ.9 ರಂದು ನಡೆಯಿತು.
ಈ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ ಖಜಾಂಚಿಯಾದ ಪ್ರಭಾಕರ ಶೆಟ್ಟಿಯವರು ನೆರವೇರಿಸಿ ಸ್ಪರ್ದಾಳುಗಳಿಗೆ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಶ್ರೀಧರ್ ಶೆಟ್ಟಿರವರು ಸೋಲು ಗೆಲುವನ್ನು ಸ್ಪರ್ಧಾಳುಗಳು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ವಿಟ್ಲದ ದೈಹಿಕ ಶಿಕ್ಷಣ ನೋಡೆಲ್ ಅಧಿಕಾರಿ ರಾಜೇಂದ್ರ ರೈ ರವರು ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ದೈನಿಕ ಶಿಕ್ಷಣ ಸಂಘದ ಉಪಾಧ್ಯಕ್ಷ ಸುರೇಶ್ ಶೆಟ್ಟಿ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ವಿಟ್ಲ ಸಂಪನ್ಮೂಲ ಅಧಿಕಾರಿ ಬಿಂದು, ಪ್ರಾಂಶುಪಾಲರಾದ ಜಯರಾಮ ರೈ, ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ ಉಪಸ್ಥಿತರಿದ್ದರು.
ಹತ್ತನೇ ತರಗತಿಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಹ ಶಿಕ್ಷಕರಾದ ಗೀತಾ ಸ್ವಾಗತಿಸಿ, ಸೌಮ್ಯ ಸಾವಿತ್ರಿ ವಂದಿಸಿದರು. ಕವಿತಾ ಎಸ್ ಗೌಡ ಕಾರ್ಯಕ್ರಮ ನಿರೂಪಿಸಿದರು. ಜೇಸಿ ಸಂಸ್ಥೆಯ ದೈಹಿಕ ಶಿಕ್ಷಕ ಭಾನುಪ್ರಕಾಶ್ ಹಾಗೂ ಶಶಿಕಲಾ ಸಹಕರಿಸಿದರು.