Monday, June 30, 2025
spot_imgspot_img
spot_imgspot_img

ವಿಟ್ಲ: ಬಂಟ್ವಾಳ ತಾಲೂಕು 6ನೇ ಚುಟುಕು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ

- Advertisement -
- Advertisement -

ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಹಾಗೂ ವಿಠಲ ಎಜುಕೇಶನ್ ಸೊಸೈಟಿ (ರಿ.) ವಿಟ್ಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು 6ನೇ ಚುಟುಕು ಸಾಹಿತ್ಯ ಸಮ್ಮೇಳನಕಾರ್ಯಕ್ರಮ ಜ.12 ರಂದು ಸುವರ್ಣ ರಂಗಮಂದಿರ ವಿಠಲ ಪ. ಪೂ. ಕಾಲೇಜು ಶ್ರೀ ರವಿ ವರ್ಮ ಕೃಷ್ಣರಾಜ ಅರಸು ವೇದಿಕೆ ಪಲಿಮಾರು ಶ್ರೀ ಜನಾರ್ದನ ಪೈ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.ಉದ್ಘಾಟಕರಾಗಿ ವಿಟ್ಲಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯೊಟ್ಟು ವಹಿಸಲಿದರೆ.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ವಿಶ್ವನಾಥ ಬಂಟ್ವಾಳ ಕನ್ನಡ ಧ್ವಜಾರೋಹಣ ನಡೆಸಲಿದರೆ.ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಹರೀಶ ಸುಲಾಯ ಒಡ್ಡಂಬೆಟ್ಟು ಚುಟುಕು ಸಾಹಿತ್ಯ ಧ್ವಜಾರೋಹಣ ಮಾಡಲಿದರೆ.ವಿಟ್ಲ ವಿಠಲ ಎಜುಕೇಶನ್ ಸೊಸೈಟಿ (ರಿ.) ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ಟ ಪ್ರದರ್ಶನ ಮಳಿಗೆ ಉದ್ಘಾಟನೆ ಮಾಡಲಿದರೆ.ಬೆಳಿಗ್ಗೆ 9:30 ರಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅರಮನೆ ಆನುವಂಶಿಕ ಮೊಕೇಸರರು, ಬಂಗಾರು ಅರಸರು ಸಮಯ ಘನ ಉಪಸ್ಥಿತಿರುವವರು.ಮೈಸೂರು ಪ್ರಧಾನ ಸಂಚಾಲಕ ಡಾ| ಎಂ.ಜಿ.ಆರ್. ಅರಸ್ ದೀಪ ಪ್ರಜ್ವಲನೆ ಮಾಡಲಿದರೆ.ಹಿರಿಯ ಸಾಹಿತಿ ಮುಳಿಯ ಶಂಕರಭಟ್ಟ ಸಮ್ಮೇಳನಾಧ್ಯಕ್ಷತೆ ವಹಿಸಲಿದರೆ.ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಆನಂದ ರೈ ಅಡ್ಕಸ್ಥಳ ಪ್ರಸ್ತಾವನೆ ಮಾಡಲಿದರೆ.ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಕರ್ನಾಟಕ ಸರ್ಕಾರ ಮಾಜಿ ಸಚಿವ ರಮಾನಾಥ ರೈ, ಕಾಸರಗೋಡು ಹಿರಿಯ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ,ಹಿರಿಯ ಪತ್ರಕರ್ತ ಗಣೇಶ ಪ್ರಸಾದ ಪಾಂಡೇಲು,ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಉಮೇಶ ನಾಯಕ್, ಕಾಸರಗೋಡು ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಶಿವರಾಮ ಕಾಸರಗೋಡು,ಮೈಸೂರು ಜಿಲ್ಲೆ ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಚುಟುಕು ಸಿರಿ ಡಾ| ರತ್ನಾ ಹಾಲಪ್ಪ ಗೌಡ, ವಿಟ್ಲ ವಿಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಉಪಸ್ಥಿತಿರುವವರು.ಮಧ್ಯಾಹ್ನ 12:20 ರಿಂದ ವಿಚಾರ ಸಂಕಿರಣ ನಡೆಯಲಿದೆ.ಮಧ್ಯಾಹ್ನ 1 ಗಂಟೆಯಿಂದ ಶರಸೇತು ಬಂಧ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.

- Advertisement -

Related news

error: Content is protected !!