Thursday, May 2, 2024
spot_imgspot_img
spot_imgspot_img

ವಿಟ್ಲ: ಅಕ್ರಮ ಗೋ ಸಾಗಾಟ; ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ- 2 ಗೋವು ಹಾಗೂ ಸಾಗಾಟ ಮಾಡುತ್ತಿದ್ದ ವಾಹನ ಪೊಲೀಸ್ ವಶಕ್ಕೆ

- Advertisement -G L Acharya panikkar
- Advertisement -

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿ 2 ಗೋವು ಹಾಗೂ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ.

ರೋಷನ್ ಡಿಸೋಜ ಎಂಬಾತ ತನ್ನ ಪಿಕಪ್‌ ವಾಹನದಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದು, ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರು ನಿಲ್ಲಿಸಿ ಪಿಕಪ್‌ ಚಾಲಕ ರೋಷನ್ ಡಿಸೋಜ ಕೇಳಿದಾಗ ಕಂಬಳದ ನೆಪ ಒಡ್ಡಿ ಕಿರಣ್ ಪೂಜಾರಿಗೆ ಸಾಗಾಟ ಮಾಡುತ್ತಿದ್ದೇನೆಂದು ಸುಳ್ಳು ಹೇಳಿದ್ದಾನೆ. ಕಿರಣ್‌ ಎಂಬವರನ್ನು ವಿಚಾರಿಸಿದಾಗ ಕುಖ್ಯಾತ ಗೋ ಸಾಗಾಟಗಾರ ಸಾಲೆತ್ತೂರಿನ ತಾರಿಕ್ ಎಂಬವರಿಗೆ ಸಾಗಾಟ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ಅಕ್ರಮ ಗೋ ಸಾಗಾಟ ಮಾಡುತ್ತಿರುವುದನ್ನು ತಿಳಿದ ಹಿಂದೂ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ವಿಟ್ಲ ಪೊಲೀಸರು 2 ಗೋವು ಹಾಗೂ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!