ವಿಟ್ಲ: ಪುಣಚ ಗ್ರಾಮ ಪಂಚಾಯತ್ನ ವ್ಯಾಪ್ತಿಯಲ್ಲಿ ಬರುವ ಕೋಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಅನ್ಯಮತೀಯ ವ್ಯಕ್ತಿ ಮಾದುಮೂಲೆ ಅಬ್ದುಲ್ಲ ಎಂಬಾತ ಅಕ್ರಮವಾಗಿ ಗೋ ಫಾರ್ಮ್ ನಿರ್ಮಾಣ ಮಾಡುತ್ತಿದ್ದು, ಇದನ್ನು ವಿರೋಧಿಸಿ ಪುಣಚ ಗ್ರಾಮ ಪಂಚಾಯತ್ ನ ಮುಂಭಾಗದಲ್ಲಿ ಹಿಂದೂ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಬಿಜೆಪಿಯ ಆಡಳಿತವಿರುವ ಪುಣಚ ಗ್ರಾಮ ಪಂಚಾಯತ್ ನ ವ್ಯಾಪ್ತಿಯಲ್ಲಿ ಬರುವ ಕೋಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಅನ್ಯಮತೀಯ ವ್ಯಕ್ತಿ ಅಬ್ದುಲ್ಲ ಮಾದುಮೂಲೆ ಎಂಬಾತ ಅಕ್ರಮವಾಗಿ ಕಟ್ಟಡ ಕಟ್ಟಿ ಅದರಲ್ಲಿ ಗೋ ಫಾರ್ಮ್ ಮಾಡಲು ಪ್ರಯತ್ನ ಮಾಡುತ್ತಿದ್ದಾನೆ. ಈ ಅಕ್ರಮ ಕಟ್ಟಡವನ್ನು ಸಕ್ರಮಗೊಳಿಸಲು ಪರವಾನಿಗೆ ನೀಡಲಾಗುತ್ತಿದ್ದು, ಈ ಕಟ್ಟಡಕ್ಕೆ ಪರವಾನಿಗೆ ನೀಡಲು ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬರ ಹುನ್ನಾರವಿದೆ.
ಅಕ್ರಮ ಕಟ್ಟಡವನ್ನು ತೆರವುಗೊಳಿಸಲು ಅವಕಾಶವಿದ್ದರೂ ಕೂಡ ಯಾವುದೇ ಕ್ರಮವನ್ನು ಪಂಚಾಯತ್ ಕೈಗೊಳ್ಳಲಿಲ್ಲ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅಕ್ರಮವಾಗಿ ಕಟ್ಟಿರುವ ಕಟ್ಟಡವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಪುಣಚ ಪಂಚಾಯತ್ ನ ಮುಂಭಾಗದಲ್ಲಿ ಹಿಂದೂ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.