Monday, April 29, 2024
spot_imgspot_img
spot_imgspot_img

ವಿಟ್ಲ: ಆಟೋ ರಿಕ್ಷಾಕ್ಕೆ ಅಡ್ಡ ಬಂದ ಮುಂಗುಸಿ; ನಿಯಂತ್ರಣ ತಪ್ಪಿ ಆಟೋ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ- ಚಾಲಕನಿಗೆ ಗಾಯ

- Advertisement -G L Acharya panikkar
- Advertisement -

ವಿಟ್ಲ: ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸಲು ಹೋಗಿ ನಿಯಂತ್ರಣ ತಪ್ಪಿ ಆಟೋ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಸಾಲೆತ್ತೂರು ಕೊಡಂಗಾಯಿ ಸೇತುವೆ ಬಳಿ ನಡೆದಿದೆ.

ಮಂಗಲಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸೇತುವೆ ಬದಿಯಲ್ಲಿ ರಸ್ತೆ ದಾಟುತ್ತಿದ್ದ ಮುಂಗುಸಿಯೊಂದು ಅಡ್ಡಬಂದಿದೆ. ಮುಂಗುಸಿಯ ಪ್ರಾಣ ರಕ್ಷಣೆಗಾಗಿ ಚಾಲಕ ಹಠಾತ್ ಬ್ರೇಕ್ ಹಾಕುತ್ತಿದ್ದಂತೆ ನಿಯಂತ್ರಣ ತಪ್ಪಿದ ಆಟೋ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಚಾಲಕ ಇಸ್ಮಾಯಿಲ್‌ ಗಾಯಗೊಂಡಿದ್ದು, ಸ್ಥಳೀಯರು ವಿಟ್ಲದ ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

Related news

error: Content is protected !!