Tuesday, May 7, 2024
spot_imgspot_img
spot_imgspot_img

ವಿಟ್ಲ: ಆಯುಷ್ಮಾನ್‌ ಭವ ಕಾರ್ಯಕ್ರಮದಡಿ ಬಿಲ್ಲವ ಸಂಘ(ರಿ) ವಿಟ್ಲ ಮತ್ತು ಶಾಮಿಯಾನ ಮಾಲಕರ ಸಂಘ ವಿಟ್ಲ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇವರ ಜಂಟಿ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಆಯುಷ್ಮಾನ್‌ ಭವ ಕಾರ್ಯಕ್ರಮದಡಿ ಬಿಲ್ಲವ ಸಂಘ(ರಿ) ವಿಟ್ಲ ಮತ್ತು ಶಾಮಿಯಾನ ಮಾಲಕರ ಸಂಘ ವಿಟ್ಲ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇವರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ರಕ್ತನಿಧಿ ಸರಕಾರಿ ಲೇಡಿಗೋಷನ್‌ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮವು ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಸಂಘದ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರು, ಪ್ರಸೂತಿ ತಜ್ಞ ಡಾ| ಗೀತಪ್ರಕಾಶ್‌ ವಹಿಸಿದರು. ಮುಖ್ಯ ಅತಿಥಿಗಳಾಗಿ ಪ್ರಾ.ಆ.ಕೇಂದ್ರ ಅಡ್ಯನಡ್ಕ ವೈದ್ಯಾಧಿಕಾರಿ ಡಾ| ವಿಶ್ವೇಶ್ವರ ವಿ.ಕೆ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲದ ಆಡಳಿತ ವೈದ್ಯಾಧಿಕಾರಿ ಡಾ| ವೇದಾವತಿ ಜೆ ಬಲ್ಲಾಳ್‌ ಭಾಗವಹಿಸಿದರು.

ಬಿಲ್ಲವ ಸಂಘದ ಅಧ್ಯಕ್ಷರು ಮಾಧವ ಪೂಜಾರಿ ವಿಟ್ಲ, ಶಾಮಿಯಾನ ಸಂಘದ ಅಧ್ಯಕ್ಷರು ಚಂದ್ರಹಾಸ ಸುವರ್ಣ, ಪ್ರಿಯಾ ಶಾಮಿಯಾನ ಬಾಬು.ಕೆ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಮಮತ ಸಂಜೀವ ಪೂಜಾರಿ, ಬಿಲ್ಲವ ಸಂಘದ ನಿಕಟಪೂರ್ವ ಅಧ್ಯಕ್ಷ, ಪಟ್ಟಣ ಪಂಚಾಯತ್‌ ಕೌನ್ಸಿಲರ್‌ ಹರೀಶ್‌ ಸಿ.ಹೆಚ್‌, ಬಿಲ್ಲವ ಸಂಘದ ನಿಕಟಪೂರ್ವ ಕಾರ್ಯದರ್ಶಿ ಸಂಜೀವ ಎಮ್‌.ಎಸ್‌, ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಜಿಲ್ಲಾ ಅಧ್ಯಕ್ಷರು ರಾಜಶೇಖರ ಶೆಟ್ಟಿ, ಶಾಮಿಯಾನ ಮಾಲಕರ ಸಂಘ ವಿಟ್ಲ ಘಟಕದ ಕಾರ್ಯದರ್ಶಿ ಪ್ರಶಾಂತ್‌ ಕುಂಡಡ್ಕ, ಬಿಲ್ಲವ ಸಂಘದ ಕಾರ್ಯದರ್ಶಿ ಲಕ್ಷ್ಮಣ ಪೂಜಾರಿ ಎಸ್‌ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ಎಲ್ಲಾ ಸಿಬ್ಬಂದಿಗಳ ಸಹಕಾರದೊಂದಿಗೆ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮವನ್ನು ಸ.ಆ.ಕೇಂದ್ರದ ಕಛೇರಿ ಅಧೀಕ್ಷಕಿ ಆಶಾಲತ ಸ್ವಾಗತಿಸಿದರು. ಸ.ಆ.ಕೇಂದ್ರ ವಿಟ್ಲ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ನಿರೂಪಿಸಿ, ಧನ್ಯವಾದವಿತ್ತರು.

- Advertisement -

Related news

error: Content is protected !!