Sunday, June 29, 2025
spot_imgspot_img
spot_imgspot_img

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿ ಸಭೆ

- Advertisement -
- Advertisement -
vtv vitla

ವಿಟ್ಲ: ತಳಮಟ್ಟದಿಂದ ಪಕ್ಷವನ್ನು ಕಟ್ಟುವ ಮೂಲಕ ಕಾಂಗ್ರೆಸ್’ನ ವೈಭವದ ದಿನಗಳನ್ನು ಮತ್ತೆ ಕಾಣಬೇಕು ಎಂದು ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದರು.

ಬೊಬ್ಬೆಕೇರಿ ಗಜಾನನ ಸಭಾಂಗಣದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ವಿಧಾನ ಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಮಾತನಾಡಿ, ಅಧಿಕಾರಕ್ಕಾಗಿ ರಾಜಕಾರಣವನ್ನು ಯಾವತ್ತೂ ಮಾಡಿಲ್ಲ. ಮಾನಸಿಕವಾಗಿ ಸಿದ್ಧವಾದಾಗ ಚುನಾವಣೆಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಮತವನ್ನು ಖರೀದಿ ಮಾಡುವ ಹೀನ ಮಟ್ಟಕ್ಕೆ ಇಳಿಯಬಾರದು. ಹತ್ತು ಜನರಿಗೆ ಬೇಕಾದ ಕೆಲಸ ಮಾಡಿದಾಗ ಮಾತ್ರ ಜನರು ನೆನಪಿಡಲು ಸಾಧ್ಯ ಎಂದರು.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಡಾ. ರಘು, ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ನವೀನ್ ಭಂಡಾರಿ, ದ. ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್, ಡಿಸಿಸಿ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ವಿ. ಕೆ ಎಂ. ಅಶ್ರಫ್ ಇದ್ದರು. ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಕೆ. ಬಿ. ಸ್ವಾಗತಿಸಿದರು. ಕೆ. ಪಿ. ಸಿ. ಸಿ. ಕಾರ್ಯದರ್ಶಿ ಎಂ. ಎಸ್. ಮಹಮ್ಮದ್ ವಂದಿಸಿದರು. ವಕ್ತಾರ ರಮಾನಾಥ ವಿಟ್ಲ ನಿರೂಪಿಸಿದರು.

- Advertisement -

Related news

error: Content is protected !!