Monday, June 30, 2025
spot_imgspot_img
spot_imgspot_img

ವಿಟ್ಲ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಜಪ್ಪ ಪೂಜಾರಿಯವರಿಗೆ ಚಂದಳಿಕೆ ವಿದ್ಯಾವರ್ಧಕ ಸಂಘದ ವತಿಯಿಂದ ಸನ್ಮಾನ

- Advertisement -
- Advertisement -

ವಿಟ್ಲ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ವಿಟ್ಲ ಚಂದಳಿಕೆ ವೀರಾಂಜನೇಯ ವ್ಯಾಯಾಮ ಶಾಲೆಯ ಸಂಸ್ಥಾಪಕ ದೇಜಪ್ಪ ಪೂಜಾರಿ ಎನ್‌ ಮುಡುಗೇರಿಸಿಕೊಂಡಿದ್ದಾರೆ. ಇವರ ಕಲಾ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಜಪ್ಪ ಪೂಜಾರಿಯವರನ್ನು ಚಂದಳಿಕೆ ವಿದ್ಯಾವರ್ಧಕ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷೆ ಭವಾನಿ ರೈ ಮಾತನಾಡಿ ದೇಜಪ್ಪ ಪೂಜಾರಿ ಅವರ ಸೇವೆಗೆ ಉತ್ತಮ ಪ್ರಶಸ್ತಿ ಬಂದಿರುವುದು ನಮ್ಮ ಊರಿಗೆ ಹೆಮ್ಮೆಯ ವಿಚಾರ ಅವರಿಗೆ ಇನ್ನು ಮುಂದೆ ರಾಜ್ಯ ಪ್ರಶಸ್ತಿ ಬರಲಿ ಎಂದು ಶುಭ ಹಾರೈಸಿದರು.

- Advertisement -

Related news

error: Content is protected !!