- Advertisement -
- Advertisement -
ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ
ವಿಟ್ಲ: ಮನೆಗೆ ಸಿಡಿಲು ಬಡಿದು ಮನೆಯ ಎಲೆಕ್ಟ್ರಿಕಲ್ ವಸ್ತುಗಳಿಗೆ ಹಾನಿಯಾದ ಘಟನೆ ವಿಟ್ಲಮುಡ್ನೂರು ಗ್ರಾಮದ ಶಾಂತಿಮಾರು ಎಂಬಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಗುಡುಗು ಸಹಿತ ಮಳೆ ವಿಟ್ಲ ಭಾಗದಲ್ಲಿ ಸುರಿದಿದ್ದು, ಈ ಸಂದರ್ಭದಲ್ಲಿ ವಿಟ್ಲ ಮೂಡ್ನೂರು ಕುಂಡಡ್ಕ ಶಾಂತಿಮಾರು ಸೋಮಪ್ಪ ಶೆಟ್ಟಿ ಅವರ ಮನೆಗೆ ಸಿಡಿಲು ಬಡಿದಿದೆ.
ಘಟನೆಯಲ್ಲಿ ಮನೆಯ ವಿದ್ಯುತ್ ಮೀಟರ್ ಬಾಕ್ಸ್ ಸೇರಿದಂತೆ ಹಲವು ಎಲೆಕ್ಟ್ರಿಕಲ್ ವಸ್ತುಗಳಿಗೆ ಹಾನಿಯಾಗಿದೆ ಮಾಹಿತಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮಂಡಲ ಪ್ರಮುಖ್ ದಯಾನಂದ ಶೆಟ್ಟಿ ಉಜಿರೆಮಾರ್ ಭೇಟಿ ನೀಡಿ ಪರಿಶೀಲಿಸಿದರು.
- Advertisement -