- Advertisement -
- Advertisement -




ವಿಟ್ಲ ಮುಡ್ನೂರು: ಕುಂಡಡ್ಕ ಕುಶಾಲನಗರದಲ್ಲಿ ನಿರ್ಮಿಸಿರುವ ಹಿಂದೂ ರುದ್ರ ಭೂಮಿ(ಮುಕ್ತಿ ಧಾಮ) ಲೋಕಾರ್ಪಣೆ ಕಾರ್ಯಕ್ರಮ ದಿನಾಂಕ ಒಕ್ಟೋಬರ್ 7-10-2025ನೇ ಮಂಗಳವಾರ ಪೂರ್ವಾಹ್ನ 11:00ಕ್ಕೆ ನಡೆಯಲಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಸಭಾ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಲೋಕಸಭಾ ಸದಸ್ಯ ಕ್ಯಾ. ಬ್ರಜೇಶ್ ಚೌಟ ರುದ್ರಭೂಮಿ ಲೋಕಾರ್ಪಣೆ ಮತ್ತು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಪುತ್ತೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕ ಸಂಜೀವ ಮಠಂದೂರು, ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಬಂಟ್ವಾಳ ಪಂ ರಾ ಇಂಜಿನಿಯರಿಂಗ್ ಉಪ ವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ತಾರನಾಥ ಸಾಲಿಯಾನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
- Advertisement -








