Saturday, June 28, 2025
spot_imgspot_img
spot_imgspot_img

ವಿಟ್ಲ ಪ. ಪಂ. ವ್ಯಾಪ್ತಿಯಲ್ಲಿ 2.50 ಕೋಟಿ ರೂ ಕಾಮಗಾರಿಗೆ ಚಾಲನೆ

- Advertisement -
- Advertisement -

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಒಟ್ಟು 2.50 ಕೋಟಿ ರೂ ವೆಚ್ಚದ ರಸ್ತೆ ಸಹಿತ ವಿವಿಧ ಕಾಮಗಾರಿಗಳಿಗೆ ಶನಿವಾರ ಶಿಲಾನ್ಯಾಸ ನೆರವೇರಿಸಿದರು.

ವಿಟ್ಲ ಪಟ್ಟಣ ಪಂಚಾಯತ್ ಇತಿಹಾಸದಲ್ಲೇ ಮೊದಲ ಬಾರಿಗೆ ಬಾರೀ ಇಷ್ಟು ದೊಡ್ಡ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿ ಅನೇಕ ವರ್ಷಗಳಿಂದ ಆಗದೇ ಇರುವ ರಸ್ತೆಗಳಿಗೆ ಈ ಬಾರಿ ಕಾಂಕ್ರೀಟ್ ಬಾಗ್ಯ ದೊರಕಿದೆ. ಕಾಂಗ್ರೆಸ್ ಎಂದರೆ ಅಭಿವೃದ್ಧಿ ಎಂದು ಜನರಿಗೆ ಗೊತ್ತಾಗಿದೆ. ನಾವು ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಮೋಸ ಮಾಡುವುದಿಲ್ಲ. ನಾವು ಹೇಳಿದ್ದನ್ನು ಮಾಡಿಯೇ ಮಾಡುತ್ತೇವೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಜನ ನೆಮ್ಮದಿಯಿಂದ ಇದ್ದಾರರೆ. ಬಿಜೆಪಿಗರು ಕೇವಲ ಬೊಗಳೆ ಬಿಟ್ಟು ಜನರನ್ನು ಮೋಸ ಮಾಡಿ ಅಧಿಕಾರಕ್ಕೆ ಬರುತ್ತಾರೆ. ಅಧಿಕಾರಕ್ಕೆ ಬಂದ ಬಳಿಕ ಜನರನ್ನು ಮರೆಯುತ್ತಾರೆ. ಧರ್ಮ ಜಾತಿಯ ಹೆಸರು ಹೇಳಿ ಅಧಿಕಾರ ಪಡೆಯುವ ಬಿಜೆಪಿಗೆ ಜನರ ನೆಮ್ಮದಿ ಮತ್ತು ಅಭಿವೃದ್ಧಿ ಬೇಕಾಗಿಲ್ಲ ಎಂದು ಶಾಸಕರು ಹೇಳಿದರು.

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ದಿನದ 24 ಗಂಟೆಯೂ ಶುದ್ದ ಕುಡಿಯುವ ನೀರನ್ನು ಮುಂದಿನ ದಿನಗಳಲ್ಲಿ ಒದಗಿಸಲಾಗುತ್ತದೆ. ಜನ ಇನ್ನು ಕುಡಿಯಲು ನೀರಿಲ್ಲ ಎಂದು ಹೇಳುವ ಪರಿಸ್ಥಿತಿ ಇರುವುದಿಲ್ಲ, ಫಿಲ್ಟರ್ ವಾಟರ್ ನ್ನು ನೀಡುತ್ತಿದ್ದು ಇದಕ್ಕಾಗಿ ಪ್ರತ್ಯೇಕವಾಗಿ ರೂ 100 ಕೋಟೆ ಅನುದಾನವನ್ನು ಮೀಸಲಿಟ್ಟಿದ್ದೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ.ಕೆ.ಬಿ, ಮುಖ್ಯಾಧಿಕಾರಿ ಗೋಪಾಲ, ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮನಾಭ ಪೂಜಾರಿ, ಪುವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಟಂತಬೆಟ್ಟು, ಉಮಾನಾಥ ಶೆಟ್ಟಿ, ರಮಾನಾಥ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ವಿಕೆಎಂ ಅಶ್ರಫ್‌, ಹಸೈನಾರ್ ನೆಲ್ಲಿಗುಡ್ಡೆ, ಡೀಕಯ್ಯ, ಲತಾವೇಣಿ, ಪದ್ಮನಿ, ನಾಮ ನಿರ್ದೇಶನ ಸದಸ್ಯರಾದ ಮಹಮ್ಮದ್ ಇಕ್ಬಾಲ್‌ ಹಾನೆಸ್ಟ್‌, ಶ್ರೀನಿವಾಸ್‌ ಶೆಟ್ಟಿ, ಸುನೀತಾ ಕೋಟ್ಯಾನ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಭವಾನಿ ರೈ ಕೊಲ್ಯ , ಬೂತ ಅಧ್ಯಕ್ಷ ವಿಕೆಎಂ ಹಂಝ, ಅಬ್ದುಲ್ ರಹಿಮಾನ್ ಕುರುಂಬಳ, ಎಂಕೆ ಮೂಸಾ. ಶೇಕ್ ಅಲಿ, ಮನೋಹರ ಲ್ಯಾನ್ಸಿ ಡಿ ಸೋಜ, ಎಸ್ ಮೊಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!