Sunday, June 29, 2025
spot_imgspot_img
spot_imgspot_img

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಮಾಣಿಲ ಗ್ರಾಮದ ಕೊಡಂದೂರು ನಿವಾಸಿ ವಿಜಯ ಕುಮಾರ್ ಕ್ರಾಸ್ತಾ(40), ಮತ್ತು ಮಂಜೇಶ್ವರ ತಾಲೂಕಿನ ಸೀತಂಗೋಳಿ ಬೆದ್ರಂಪಲ್ಲ ನಿವಾಸಿ ಜಯಪ್ರಕಾಶ್(40) ಬಂಧಿತ ಆರೋಪಿಗಳು.

ಸಂಘದ ಮೇಲ್ಚಾವಣಿ ಹಂಚನ್ನು ಕಳ್ಳರು ತೆಗೆದು ಒಳಗಡೆ ಬಂದು ಕಚೇರಿಯ ಕಪಾಟಿನ ಬಾಗಿಲು ತೆಗೆದು ಹುಡುಕಾಡಿದ್ದು ಯಾವುದೇ ಹಣ,ಬೆಲೆ ಬಾಳುವ ವಸ್ತು ಸಿಗದೆ ಕಳವಿಗೆ ಯತ್ನಿಸಿದ್ದರು. ಘಟನೆ ಬಗ್ಗೆ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಮಾಣಿಲ ಶಾಖೆ ವ್ಯವಸ್ಥಾಪಕ ಜಯರಾಮ ಅವರು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು.

ಘಟನೆ ನಡೆದು ಎರಡು ದಿನಗಳಲ್ಲಿ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್ ಇ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವಿಟ್ಲ ಎಸೈ ಸಂದೀಪ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಪ್ರಸನ್ನ, ಹೇಮರಾಜ್, ಪ್ರತಾಪ್ ರೆಡ್ಡಿ, ಲೋಕೇಸ್ ಅವರ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.

ಪೆರುವಾಯಿ ವ್ಯವಸಾಯ ಸಂಘದ ಪ್ರಮುಖ ಶಾಖೆಯಲ್ಲಿ ಈ ಹಿಂದೆ ಕಳ್ಳತನ ನಡೆದಿತ್ತು. ಈ ಪ್ರಕರಣವನ್ನು ಕೂಡಾ ಇದೇ ಪೊಲೀಸರ ತಂಡ ಯಶಸ್ವಿಯಾಗಿ ಪತ್ತೆ ಹಚ್ಚಿದ್ದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!