Sunday, June 29, 2025
spot_imgspot_img
spot_imgspot_img

ವಿಟ್ಲ: ಕೇಂದ್ರದ ಮಾಜಿ‌ ಸಚಿವ ಆಸ್ಕರ್ ಪೆರ್ನಾಂಡಿಸ್ ಗುಣಮುಖರಾಗಲು ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರಾರ್ಥನೆ

- Advertisement -
- Advertisement -

ವಿಟ್ಲ: ಕೇಂದ್ರದ ಮಾಜಿ ಸಚಿವರು ರಾಜ್ಯಸಭೆಯ ಸದಸ್ಯರು ಆಗಿರುವ ಶ್ರೀ ಆಸ್ಕರ್ ಪೆರ್ನಾಂಡಿಸ್ ಅವರು‌ ಶೀಘ್ರವಾಗಿ ಗುಣಮುಖರಾಗಲು ಇಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ವಿಟ್ಲ ವ್ಯಾಪ್ತಿಯ ಪಂಚಲಿಂಗೇಶ್ವರ ದೇವಸ್ಥಾನ, ಶೋಕಮಾತೆ ಇಗರ್ಜಿ ಚರ್ಚ್, ವಿಟ್ಲ ಕೇಂದ್ರ ಜುಮಾ ಮಸೀದಿ ಈ ಪವಿತ್ರ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಅಳಿಕೆ ಗ್ರಾಮ ಪಂಚಾಯತಿ ಮಾಜಿ‌ ಅಧ್ಯಕ್ಷ ಪದ್ಮನಾಭ ಪೂಜಾರಿ ಅಳಿಕೆ, ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕದ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ ಉಪಸ್ಥಿತರಿದ್ದರು.


ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ವಿಕೆಎಮ್ ಅಶ್ರಫ್, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕರೀಮ್ ಕುದ್ದುಪದವು, ವಿಟ್ಲ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಶೋಕ ಡಿಸೋಜ, ಪಕ್ಷದ ಪ್ರಮುಖರಾದ ಎಸ್ ಕೆ ಮಹಮ್ಮದ್ ಉಪಸ್ಥಿತರಿದ್ದರು.

driving
- Advertisement -

Related news

error: Content is protected !!