ವಿಟ್ಲ: ಕರೋಪಾಡಿ ಗ್ರಾಮದ ಕಿರಣ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೀವಬೆದರಿಕೆ ಒಡ್ಡಿದ ಪ್ರಕರಣ ಬೆಳಕಿಗೆ ಬಂದಿದ್ದು ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಡಿ, 26 ರಂದು ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಸಂತ್ರಸ್ಥೆಯ ಕುಟುಂಬಸ್ಥರು ಹಿಂದೂ ಜಾಗರಣ ವೇದಿಕೆಯು ಪ್ರಮುಖರಿಗೆ ತಿಳಿಸಿದ್ದು ಈತನನ್ನು ಶೀಘ್ರದಲ್ಲಿ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.
ಆರೋಪಿ ಕಿರಣ್, ಕರೋಪಾಡಿ ಗ್ರಾಮದಲ್ಲಿ ಗಾಂಜಾ ವ್ಯವಹಾರ ಮಾಡುತ್ತಿದ್ದು ಈ ಹಿಂದೆ ವಿಟ್ಲ ಠಾಣೆಯಲ್ಲಿ ಬಂಧನಕ್ಕೆ ಒಳಗಾದ ಬಗ್ಗೆಯೂ ಮಾಹಿತಿ ಇದೆ. ಆದ್ದರಿಂದ ಪ್ರಕರಣದ ಆರೋಪಿಯನ್ನು ತಕ್ಷಣ ಬಂದಿಸಿ ಸೂಕ್ತ ಕಾನೂನು ಕ್ರಮ ಕೈಗೊಂಡು ಸಂತ್ರಸ್ತ ಯುವತಿಗೆ ರಕ್ಷಣೆಯನ್ನು ನೀಡಬೇಕೆಂದು ಹಿಂಜಾವೇ ಆಗ್ರಹಿಸಿದೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸುವ ವೇಳೆ ಮಂಗಳೂರು ವಿಭಾಗ ಸಂಪರ್ಕ್ ಪ್ರಮುಖ್ ರತ್ನಾಕರ ಶೆಟ್ಟಿ ಕಲ್ಲಡ್ಕ, ಹಿಂಜಾವೇ ವಿಟ್ಲ ತಾಲೂಕು ಇದರ ಅಧ್ಯಕ್ಷ ಗಣೇಶ್ ಕೆದಿಲ, ಹಿಂಜಾವೇ ವಿಟ್ಲ ತಾಲೂಕು ಇದರ ಉಪಾಧ್ಯಕ್ಷ ರಾಜೇಶ್ ಕರೋಪಾಡಿ ಸೇರಿದಂತೆ ಮೊದಲಾದವರು ಜೊತೆಗಿದ್ದರು.