Thursday, March 28, 2024
spot_imgspot_img
spot_imgspot_img

ಫೋಟೊ ತೆಗೆಸಿಕೊಳ್ಳಲು ಹೋದ ಯುವಕ ಜಲಪಾತದಲ್ಲಿ ಜಾರಿ ಬಿದ್ದು ಯುವಕ ಸಾವು.!

- Advertisement -G L Acharya panikkar
- Advertisement -

ಹಾಸನ : ಫೋಟೋ ತೆಗೆಸಿಕೊಳ್ಳಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕಾಡುಮನೆ ಸಮೀಪ ಗುಡಾಣಕೆರೆ ಗ್ರಾಮದಲ್ಲಿ ನಡೆದಿದೆ.

 ತಾಲೂಕಿನ ಮಾರನಹಳ್ಳಿ ಗ್ರಾಮದ ರತನ್ ಮೃತಪಟ್ಟ ದುರ್ದೈವಿಯಾಗಿದ್ದಾರೆ.ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ರಾತ್ರಿಯಷ್ಟೇ ಬೆಂಗಳೂರಿನಿಂದ ಮಹಾಲಯ ಅಮವಾಸ್ಯೆ ಅಂಗವಾಗಿ ಊರಿಗೆ ಬಂದಿದ್ದ ಎಂದು ತಿಳಿದು ಬಂದಿದೆ. ಜೊತೆಯಲ್ಲಿದ್ದ ಒಬ್ಬರಿಗೆ ಮೊಬೈಲ್ ಕೊಟ್ಟು ಫೋಟೋ ತೆಗೆಸಿಕೊಳ್ಳುವಾಗ ಕಾಲು ಜಾರಿ ಮೇಲಿಂದ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುತ್ತಾನೆ.ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!