Monday, June 30, 2025
spot_imgspot_img
spot_imgspot_img

ಬಸ್ ಟಿಕೆಟ್ ದರವನ್ನು ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ; ಕ.ರ.ಸಾ.ನಿ ಅಧ್ಯಕ್ಷ ರಾಜು ಕಾಗೆ

- Advertisement -
- Advertisement -

ಕರ್ನಾಟಕ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದು ಒಂದು ವರ್ಷ ಕಳೆಯಿತು. ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಸಂಚರಿಸುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಗೆ ನಷ್ಟವಾಗಿದೆ. ಹೀಗಾಗಿ ಬಸ್ ಟಿಕೆಟ್ ದರವನ್ನು ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದಾರೆ.

ಕಾಗವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಸಂಸ್ಥೆ ನಷ್ಟ ಅನುಭವಿಸಿದೆ. ಡೀಸೆಲ್ ಮತ್ತು ಬಸ್ ಬಿಡಿ ಭಾಗಗಳ ಬೆಲೆಯೂ ಹೆಚ್ಚಾಗಿದೆ. ಕಳೆದ 10 ವರ್ಷಗಳಿಂದ ಬಸ್ ದರ ಏರಿಕೆ ಮಾಡಿಲ್ಲ. ಈ ಸೌಲಭ್ಯದ ಹೊಣೆಯನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಹಿಸಿಕೊಳ್ಳಲಿದೆ. ಹಳೆಯ ಕ್ಲಬ್ ಕಟ್ಟಡವನ್ನು ನವೀಕರಿಸಿ ಬಾಡಿಗೆಗೆ ನೀಡಲಾಗುತ್ತಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಪೆಟ್ರೋಲ್ ಬೆಲೆ 3 ರೂ. ಮತ್ತು ಡಿಸೇಲ್ ಬೆಲೆ 3.50 ರೂಪಾಯಿ ಏರಿಕೆ ಮಾಡಿತ್ತು. ಇದರಿಂದ ರಾಜ್ಯದ ಜನರಿಗೆ ಆಘಾತ ಉಂಟಾಗಿತ್ತು. ಬಳಿಕ ಹಾಲಿನ ಬೆಲೆ ಏರಿಕೆಯಿಂದ ಜನ ಕಂಗ್ಗೆಟ್ಟಿದ್ದರು. ಇದೀಗ ಬಸ್ ಟಿಕೆಟ್ ದರ ಏರಿಕೆಯು ಜನರಿಗೆ ಸಂಕಷ್ಟ ತರಲಿದೆ.

- Advertisement -

Related news

error: Content is protected !!