Friday, March 29, 2024
spot_imgspot_img
spot_imgspot_img

ಖಾಸಗಿ ಶಿಕ್ಷಕರು, ಮತ್ತು ಸಿಬ್ಬಂದಿ ಮಣ್ಣು ತಿನ್ನಬೇಕಾ? -ಶಶಿಕುಮಾರ್!

- Advertisement -G L Acharya panikkar
- Advertisement -

ಬೆಂಗಳೂರು: ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂಬ ಶಿಕ್ಷಣ ಸಚಿವ ಸುರೇಶ ಕುಮಾರ್ ಹೇಳಿಕೆಗೆ ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಆಕ್ರೋಶ ವ್ಯಕ್ತಪಡಿಸಿದೆ.
ಅಷ್ಟೇ ಅಲ್ಲ, ನವೆಂಬರ್ 30ರೊಳಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಬೇಕು. ಇಲ್ಲವಾದ್ರೆ ಆನ್‍ಲೈನ್ ಕ್ಲಾಸ್ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದೆ.


ಕೊರೋನಾ ಹಿನ್ನೆಲೆಯಲ್ಲಿ ಎಲ್ಲರ ಆರ್ಥಿಕ ಸಂಕಷ್ಟ ಹೆಚ್ಚಿದ್ದು, ಶುಲ್ಕ ಪಾವತಿಸದಿದ್ದರೂ ವಿದ್ಯಾರ್ಥಿಗಳ ಹಿತವನ್ನು ಗಮನದ್ಲಲಿಡಬೇಕು. ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯನ್ನು ತೇರ್ಗಡೆಗೊಳಿಸುವುದಿಲ್ಲ ಎಂದು ಖಾಸಗಿ ಶಾಲೆಗಳು ಹೇಳುವಂತಿಲ್ಲ ಎಂದು ಸುರೇಶ ಕುಮಾರ್ ಹೇಳಿದ್ದರು.


ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್, ಶಿಕ್ಷಣ ಸಚಿವರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಸಚಿವರು ಮನುಷ್ಯತ್ವ ಇಲ್ಲದೆ ಹೇಳಿಕೆ ನೀಡಿದ್ದಾರೆ. ಶುಲ್ಕ ಕಟ್ಟದೆ ಹೋದರೆ ಶಿಕ್ಷಕರು, ಇತರ ಸಿಬ್ಬಂದಿ ಮಣ್ಣು ತಿನ್ನಬೇಕಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

- Advertisement -

Related news

error: Content is protected !!