- Advertisement -
- Advertisement -
ಚಾಮರಾಜನಗರ: ಪತ್ನಿಯೊಬ್ಬಳು ತನ್ನ ಪ್ರಿಯಕರನ ಜತೆ ಸೇರಿ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ಚಾಮರಾಜನಗರ ಜಿಲ್ಲೆಯಿಂದ ವರದಿಯಾಗಿದೆ. ಗುಂಡ್ಲುಪೇಟೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ನಾಗರಾಜ ನಾಯಕ್ ಮೃತ ದುರ್ದೈವಿ. ಪತ್ನಿ ಪದ್ಮ ಮತ್ತು ಆಕೆಯ ಪ್ರಿಯಕರ ಮಣಿಕಂಠ ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕಲ್ಲು ತಲೆ ಮೇಲೆ ಎತ್ತಿ ಹಾಕಿ ಕೊಲೆ ಮಾಡಲಾಗಿದೆ.ಬೇಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
- Advertisement -