- Advertisement -
- Advertisement -
ಶಾಲಾ ಮುಖ್ಯ ಶಿಕ್ಷಕರ ಕೊಠಡಿ ಬಳಿ ತಲೆ ಬುರುಡೆ ಇಟ್ಟು ವಾಮಾಚಾರ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಿಮ್ಮಪ್ಪಯ್ಯನ ಹಳ್ಳಿ ಸರ್ಕಾರಿ ಪ್ರೌಢ ಶಾಲೆ ಬಳಿ ನಡೆದಿದೆ. ತಲೆ ಬುರುಡೆ, ನಿಂಬೆಹಣ್ಣು, ಎಲೆ ಅಡಿಕೆ, ಕುಂಕುಮ ಬಳಸಿ ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಶಾಲೆಯಲ್ಲಿ ಶಿಕ್ಷಕರ ಮೇಲಿನ ದ್ವೇಷಕ್ಕೆ ವಾಮಾಚಾರ ಮಾಡಿರುವ ಶಂಕೆ ಕಂಡುಬಂದಿದ್ದು, ಕಿಡಿಗೇಡಿಗಳ ಕೃತ್ಯದಿಂದ ವಿಧ್ಯಾರ್ಥಿಗಳು & ಪೋಷಕರಲ್ಲಿ ಆತಂಕ ಮೂಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -