Monday, June 30, 2025
spot_imgspot_img
spot_imgspot_img

ಬೆಳ್ತಂಗಡಿ: ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿ ಮಹಿಳೆ ಮೃತ್ಯು : ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರಿಂದ ಆರೋಪ

- Advertisement -
- Advertisement -

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಮೃತ ಮಹಿಳೆ.

ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಎರಡನೇ ಹೆರಿಗೆಗಾಗಿ ಗಾಯತ್ರಿಯವರು ಎ 03 ರಂದು ದಾಖಲಾಗಿದ್ದರು ಎ04 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದರೆ ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದು ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡರಲ್ಲದೇ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.
ಮೃತ ಮಹಿಳೆಗೆ 3 ವರ್ಷದ ಹೆಣ್ಣು ಮಗುವೊಂದಿದ್ದು ಇಬ್ಬರು ಪುಟ್ಟ ಮಕ್ಕಳು ತಾಯಿಯನ್ನು ಕಳೆದುಕೊಂಡಂತಾಗಿದೆ. ಈ ಕುರಿತು ಯಾವುದೇ ಪೊಲೀಸ್‌ ದೂರು ದಾಖಲಾಗಿಲ್ಲ

- Advertisement -

Related news

error: Content is protected !!