ವಿಟ್ಲ : ಕೇರಳ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಮಹಿಳೆಯೋರ್ವರು ಬಸ್ಸಿನಿಂದ ಹೊರಗೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಬದನಾಜೆ ಎಂಬಲ್ಲಿ ಸಂಭವಿಸಿದೆ.
ಗಾಯಾಳು ಮಹಿಳೆಯನ್ನು ಕುಳ ಗ್ರಾಮದ ನಿವಾಸಿ ಫಾತಿಮಾ ಎಂದು ಗುರುತಿಸಲಾಗಿದೆ.
ಫಾತಿಮಾ ಅವರು ಪುತ್ರಿ ಜೊತೆಗೆ ಕೆ ಎಲ್ 15 ಎ0001 ನೋಂದಣಿ ಸಂಖ್ಯೆಯ ಕೇರಳದ ಕೆ ಎಸ್ ಅರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದಂರ್ಭದಲ್ಲಿ ವಿಟ್ಲ ಕಸಬಾ ಗ್ರಾಮದ ಬದನಾಜೆ ಎಂಬಲ್ಲಿಗೆ ತಲುಪಿದಾಗ, ಬಸ್ ಚಾಲಕ ತಿರುವು ರಸ್ತೆಯಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ,ಫಾತಿಮಾ ಅವರು ಬಸ್ಸಿನ ಮುಂಭಾಗದ ಬಾಗಿಲಿನ ಮೂಲಕ ಹೊರಗೆ ಎಸೆಯಲ್ಪಟ್ಟು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ನಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 208/2023 ಕಲಂ: 279, 337 IPC ಯಂತೆ ಪ್ರಕರಣ ದಾಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ