Thursday, May 2, 2024
spot_imgspot_img
spot_imgspot_img

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ; ಪತಿ ವಿರುದ್ಧ ಕೊಲೆ ಆರೋಪ

- Advertisement -G L Acharya panikkar
- Advertisement -
vtv vitla

ಗಂಡನ ನೀಡುತ್ತಿದ್ದ ವರದಕ್ಷಿಣೆ ಕಿರುಕುಳದಿಂದ ಹೆಂಡತಿ ಸಾವನ್ನಪ್ಪಿದ್ದು, ಮಹಿಳೆಯ ಪೋಷಕರು ಪತಿ ವಿರುದ್ಧ ಕೊಲೆ ಆರೋಪ ಹೊರಿಸಿ ಹಾಸನ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅನಿತಾ (27) ಮೃತಪಟ್ಟ ಮಹಿಳೆ.

8 ವರ್ಷಗಳ ಹಿಂದೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ ಮೂರೇಹಳ್ಳಿ ಗ್ರಾಮದ ಅನಿತಾಳನ್ನ ಯಡಿಯೂರು ಗ್ರಾಮದ ಯೋಗೇಶ್‌ಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು, ಮೊದಲ ಮಗು ಅನಾರೋಗ್ಯದಿಂದ ಸಾವನ್ನಪ್ಪಿತ್ತು. ಆರಂಭದಲ್ಲಿ ಸಂಸಾರ ಚೆನ್ನಾಗಿಯೇ ಇತ್ತು. ಕ್ರಮೇಣ ಯೋಗೇಶ್‌ ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಹತ್ತಾರು ಬಾರಿ ಸಂಧಾನ ಮಾಡಿ ಕಳುಹಿಸಲಾಗಿತ್ತು. ಎರಡು ಬಾರಿ ಈ ಪ್ರಕರಣ ಪೊಲೀಸ್‌ ಠಾಣಾ ಮೆಟ್ಟಿಲೇರಿತ್ತು. ಆದರೆ ಯೋಗೇಶ್‌ ವರದಕ್ಷಿಣೆಗಾಗಿ ಕಿರುಕುಳ ನೀಡುವುದನ್ನು ಮಾತ್ರ ಬಿಟ್ಟಿರಲಿಲ್ಲ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆಯೂ ಪತಿ-ಪತ್ನಿ ನಡುವೆ ಜಗಳ ನಡೆದು ಅನಿತಾ ತವರು ಮನೆ ಸೇರಿದ್ದಳು. ಬಳಿಕ ರಾಜೀ ಸಂಧಾನ ನಡೆದು ಯೋಗೇಶ್‌ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿದ್ದ. ಬುಧವಾರ ಅನಿತಾ ತನ್ನ ಪೋಷಕರಿಗೆ ಕರೆ ಮಾಡಿ ಹಲ್ಲೆ ಮಾಡುತ್ತಿದ್ದಾನೆ ಬನ್ನಿ ಅಂತಾ ಕರೆದಿದ್ದು, ಪೋಷಕರು ಬಂದು ನೋಡುವಷ್ಟರಲ್ಲಿ ಅನಿತಾ ಸಾವನ್ನಪ್ಪಿದ್ದಾಳೆ. ಬಳಿಕ ಪತಿ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ.

ಅನಿತಾಳನ್ನು ಯೋಗೇಶ್ ಕೊಲೆ ಮಾಡಿದ್ದು, ಆತನನ್ನು ಬಂಧಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ. ಸದ್ಯ ಕೇಸ್‌ ದಾಖಲಿಸಿಕೊಂಡಿರುವ ಹಾಸನ ಬಡಾವಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!