Saturday, June 28, 2025
spot_imgspot_img
spot_imgspot_img

ಮಂಗಳೂರು: ಮಹಿಳೆಯ ಅಜಾಗರೂಕ ಕಾರು ಚಾಲನೆ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿ ಬಲಿ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಮಂಗಳೂರು: ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಅಮಾಯಕರೊಬ್ಬರು ಪ್ರಾಣ ಕಳೆದುಕೊಂಡ ಘಟನೆ ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ನಮ್ಮ ಕುಡ್ಲ – ವಿಜಾರ್ಡ್ ಕೇಬಲ್ ನೆಟ್ವರ್ಕ್ ನಲ್ಲಿ ಟೆಕ್ನೀಶಿಯನ್ ಆಗಿದ್ದ, ತೊಕ್ಕೊಟ್ಟು ಬಳಿಯ ಕಲ್ಲಾಪು ನಿವಾಸಿ ಹರೀಶ್ (43) ಎಂದು ಗುರುತಿಸಲಾಗಿದೆ.

ಇವರು ರಸ್ತೆ ಬದಿ ಬೈಕ್ ನಿಲ್ಲಿಸಿ ಮಾತನಾಡುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಬಂದ ಡಸ್ಟರ್ ಕಾರು ನಿಯಂತ್ರಣ ತಪ್ಪಿ ಬಲಬದಿಯ ಡಿವೈಡರ್ ಗೆ ಡಿಕ್ಕಿಯಾಗಿ ಹರೀಶ್ ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ ಹರೀಶ್ ಅವರನ್ನು ಕೂಡಲೇ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತ ಹರೀಶ್ ಪತ್ನಿ , ಇಬ್ಬರು ಗಂಡು ಮಕ್ಕಳು, ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

- Advertisement -

Related news

error: Content is protected !!