Sunday, May 12, 2024
spot_imgspot_img
spot_imgspot_img

ಮದುವೆಯಾಗಲು ನಿರಾಕರಿಸಿದ್ದಕ್ಕೆ ಮಹಿಳೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿ ಜೀವಬೆದರಿಕೆ: ದೂರು ದಾಖಲು

- Advertisement -G L Acharya panikkar
- Advertisement -

ಸಂತ್ರಸ್ತ ಮಹಿಳೆಗೆ 7 ವರ್ಷದ ಹಿಂದೆ ಮದುವೆಯಾಗಿ ವಿಚ್ಛೇದನವಾಗಿದ್ದು,ತನ್ನ ಮಗನೊಂದಿಗೆ ತಾಯಿ ಮನೆಯಲ್ಲಿ ವಾಸ್ತವ್ಯವಿದ್ದಾರೆ.2022 ನೇ ವರ್ಷದಲ್ಲಿ ಸಂತ್ರಸ್ತ ಮಹಿಳೆಗೆ ಮೇಟ್ರಿಮೋನಿಯೊಂದರ ಮೂಲಕ ಆರೋಪಿ ಪ್ರಶಾಂತ್‌ ಕೋಟ್ಯಾನ್‌ ಉಡುಪಿ ಎಂಬಾತನ ಪರಿಚಯವಾಗಿ ಮದುವೆಯಾಗಲು ತೀರ್ಮಾನಿಸಿದ್ದು, ಆರೋಪಿಯ ಪೂರ್ವಾಪರವನ್ನು ಮಹಿಳೆಯ ಮನೆಯವರು ವಿಚಾರಿಸಿದಾಗ ಉತ್ತಮ ಅಭಿಪ್ರಾಯ ಕಂಡುಬಾರದ ಹಿನ್ನೆಲೆಯಲ್ಲಿ, ಸಂತ್ರಸ್ತ ಮಹಿಳೆ ಮತ್ತು ಮನೆಯವರು ಆರೋಪಿಯನ್ನು ನಿರಾಕರಿಸಿದ್ದಾರೆ.

ಇದರಿಂದ ಅಸಮಧಾನಗೊಂಡ ಆರೋಪಿಯು ಮಹಿಳೆಗೆ ಕರೆಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಗಳನ್ನು ಹಾಕುವುದಾಗಿ ಹಾಗೂ ಕೊಲೆ ಮಾಡುವುದಾಗಿ ಜೀವಬೆದರಿಕೆ ಒಡ್ಡಿದ್ದಾನೆ. ಮುಂದುವರಿದಂತೆ ಆರೋಪಿಯು ಮಹಿಳೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಾನೆ ಈ ಬಗ್ಗೆ ದ.ಕ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 15/2024 ಕಲಂ: 354(D),506 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!