Friday, April 26, 2024
spot_imgspot_img
spot_imgspot_img

ನಟ ದರ್ಶನ್​ ಗೆ ವಂಚನೆ ಯತ್ನ; ನಕಲಿ ಬ್ಯಾಂಕ್ ಸಿಬ್ಬಂದಿ ಅರೆಸ್ಟ್​

- Advertisement -G L Acharya panikkar
- Advertisement -

ಸೆಲೆಬ್ರಿಟಿಗಳ ಹೆಸರನ್ನು ಬಳಕೆ ಮಾಡಿಕೊಂಡು ಸಾಕಷ್ಟು ಜನರು ಮೋಸ ಮಾಡೋಕೆ ಕಾಯುತ್ತಿರುತ್ತಾರೆ. ಈ ಮೊದಲು ಈ ರೀತಿಯ ಸಾಕಷ್ಟು ಘಟನೆಗಳು ನಡೆದಿವೆ. ಈಗ ನಟ ದರ್ಶನ್ ವಿಚಾರದಲ್ಲೂ ಅದೇ ರೀತಿ ಆಗಿದೆ. ನಿಮ್ಮ ಗೆಳೆಯರು 25 ಕೋಟಿ ಸಾಲಕ್ಕೆ ಅರ್ಜಿ ಹಾಕಿದ್ದು, ಶ್ಯೂರಿಟಿಯಲ್ಲಿ ನಿಮ್ಮ ಹೆಸರಿದೆ ಎಂದು ನಕಲಿ ಬ್ಯಾಂಕ್​ ಸಿಬ್ಬಂದಿ ದರ್ಶನ್​ ಬಳಿ ತೆರಳಿದ್ದರು.

ನಕಲಿ ಬ್ಯಾಂಕ್​ ಸಿಬ್ಬಂದಿ ಅರುಣಾ ಎಂಬಾಕೆ ದರ್ಶನ್​ ಬಳಿ ತೆರಳಿದ್ದಳು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದಳು. ನಾನು ಬ್ಯಾಂಕ್ ಮ್ಯಾನೇಜರ್ ಎಂದೇ ಆಕೆ ಪರಿಚಯಿಸಿಕೊಂಡಿದ್ದಳು. ‘ನಿಮ್ಮ ಸ್ನೇಹಿತರಿಂದ ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ₹25 ಕೋಟಿ ಲೋನ್‌ಗೆ ಬೇಡಿಕೆ ಇಟ್ಟಿದ್ದಾರೆ’ ಎಂದು ಅರುಣಾ ಹೆಳಿದ್ದಳು.

ಈ ಬಗ್ಗೆ ಪರಿಶೀಲಿಸಿದಾಗ ಲೋನ್‌ಗೆ ಯಾರು ಅರ್ಜಿ ಸಲ್ಲಿಸಿಲ್ಲ ಎಂಬುದು ಗೊತ್ತಾಗಿದೆ. ಎರಡು ದಿನದ ಹಿಂದೆ ನಟ ದರ್ಶನ್ ಸ್ನೇಹಿತರು ಈ ಬಗ್ಗೆ ಮೈಸೂರಿನ ಹೆಬ್ಬಾಳ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್​ ಸ್ನೇಹಿತರ ದೂರನ್ನು ಆಧರಿಸಿ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ.

ಸದ್ಯ ಮೈಸೂರಿನ ಎನ್​ಆರ್​​ ಎಸಿಪಿ ಕಚೇರಿಗೆ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರನ್ನು ಪೊಲೀಸರು ಕರೆಸಿದ್ದಾರೆ. ಸದ್ಯ, ಇಬ್ಬರಿಂದ ಹೇಳಿಕೆ ಪಡೆಯಲಾಗುತ್ತಿದೆ.

- Advertisement -

Related news

error: Content is protected !!