ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ಮಾಡಿದ್ದರಿಂದ ಮಹಿಳೆ ಸಾವನಪ್ಪಿದ್ದಾಳೆ ಎಂದು ಆರೋಪಿಸಿ, ಆಯಂಬುಲೆನ್ಸ್ನಲ್ಲಿ ಶವ ಇಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಮೃತ ನಾಜ್ನಿ (34)ಗೆ ಇದ್ದಕ್ಕಿದ್ದಂತೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದ್ದ ಪರಿಣಾಮ ಅಂಬೇಡ್ಕರ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ವೈದ್ಯರು ಎರಡು ದಿನವಾದರೂ ಚಿಕಿತ್ಸೆ ನೀಡಿಲ್ಲ . ಎರಡು ದಿನದ ಬಳಿಕ ಆಪರೇಷನ್ ಮಾಡಿದ್ದಾರೆ.
ಆಪರೇಷನ್ ಸಕ್ಸಸ್ ಆಗಿದೆ, ಎರಡು ದಿನ ನಿಗಾ ಇಡಲು ICUವಿಗೆ ಶಿಫ್ಟ್ ಮಾಡಿದ್ದರು. ನಂತರ ನರದ ಸಮಸ್ಯೆ ಇದೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ವೈದ್ಯರು ಸೂಚಿಸಿದ್ದರು. ಬೇರೆ ಆಸ್ಪತ್ರೆಗೆ ತೆರಳುವ ವೇಳೆ ಆಂಬ್ಯುಲೆನ್ಸ್ನಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಸರಿಯಾದ ಸಮಯಕ್ಕೆ ನಾಜ್ನಿಗೆ ಚಿಕಿತ್ಸೆ ಸಿಕ್ಕಿದ್ದರೆ ಈ ದುರ್ಘಟನೆ ಸಂಭವಿಸುತ್ತಿರಲಿಲ್ಲ. ಆಕೆಗೆ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಿಟ್ಟಾದ ಕುಟುಂಬಸ್ಥರು ಆಸ್ಪತ್ರೆಯ ಮುಂದೆ ಆಯಂಬುಲೆನ್ಸ್ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಇನ್ನು 34 ವರ್ಷದ ನಾಜ್ನಿಯನ್ನು ಕಳೆದುಕೊಂಡ ಕುಟಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.