Friday, April 26, 2024
spot_imgspot_img
spot_imgspot_img

ಮಾರುಕಟ್ಟೆಗೆ ಹೋಗಿ ಬರುವುದಾಗಿ ಹೇಳಿ ವಿಚ್ಛೇದನ ಪಡೆದ ಮಹಿಳೆ ನಾಪತ್ತೆ; ಪ್ರಿಯಕರನ ಸಹಾಯದಿಂದಲೇ ಅರೆಸ್ಟ್, ಅಸಲಿಯತ್ತೇನು?

- Advertisement -G L Acharya panikkar
- Advertisement -

ಹುಬ್ಬಳ್ಳಿ: ಪ್ರಿಯತಮನ ಜೊತೆ ಹೊಸ ಜೀವನ ಆರಂಭಿಸಲು ಹೊರಟವಳು ಪೊಲೀಸರ ಅತಿಥಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬಂಧಿತ ಆರೋಪಿ ಹುಬ್ಬಳ್ಳಿಯ ರಾಮಲಿಂಗೇಶ್ವರ ನಿವಾಸಿ ಶಬನಂ ಎನ್ನಲಾಗಿದೆ.

ಕೌಟುಂಬಿಕ ಕಲಹದಿಂದ ವಿಚ್ಛೇದನ ಪಡೆದ ಮಹಿಳೆ ಶಬನಂ ಮಂಡ್ಯ ಮೂಲದ ಯುವಕನನ್ನು ಪ್ರೀತಿಸುತ್ತಿದ್ದಳು. ಆ ಯುವಕನ‌ ಜೊತೆಗೆ ಮದುವೆಯಾಗಲು ಹೊರಟ ಶಬನಂ, ಶನಿವಾರ ಹುಬ್ಬಳ್ಳಿಯಿಂದ ಬೆಂಗಳೂರಿನ ಬಸ್ಸು​ ಹತ್ತಿದ್ದಾಳೆ. ಆಕೆ ಹೋಗುವಾಗ ಸಂಬಂಧಿಕರೊಬ್ಬರ ಆರು ವರ್ಷದ ಮಗಳನ್ನು ಸಹ ಜೊತೆಯಲ್ಲಿ ಕರೆದುಕೊಂಡು ಹೋಗಿದ್ದಾಳೆ.

ಮಾರುಕಟ್ಟೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಶಬನಂ, ಸಂಜೆಯಾದರೂ ಮನೆಗೆ ಬಾರದ ಕಾರಣ ಬಾಲಕಿಯ ಪೋಷಕರು ಆತಂಕಕ್ಕೊಳಗಾಗಿದ್ದರು. ಮಹಿಳೆಯ ಮೊಬೈಲ್​ ಗೆ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ ಬಾಲಕಿ ಪೋಷಕರು ಹುಬ್ಬಳ್ಳಿಯ ಗೋಕುಲ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ತಕ್ಷಣ ಎಚ್ಚೆತ್ತ ಪೊಲೀಸರು ಮಗುವಿನ ರಕ್ಷಣೆಗೆ ತಂಡ ರಚಿಸಿದ್ದಾರೆ. ಶಬನಂ ಫೋನ್​ ಟ್ರೇಸ್​ ಮಾಡಿದಾಗ ಬೆಂಗಳೂರಿನಲ್ಲಿರುವುದು ಪತ್ತೆಯಾಗಿದೆ. ಕೂಡಲೇ ಹುಬ್ಬಳ್ಳಿ ಪೊಲೀಸರು, ಉಪ್ಪಾರಪೇಟೆ ಪೊಲೀಸರಿಗೆ ಮಾಹಿತಿ ನೀಡಿ, ಆಕೆಯ ಪ್ರಿಯಕರನ ಸಹಾಯದಿಂದಲೇ ಆರೋಪಿಯನ್ನು ಬಂಧಿಸಿದ್ದಾರೆ.

driving
- Advertisement -

Related news

error: Content is protected !!