Sunday, June 14, 2026
spot_imgspot_img
spot_imgspot_img

ಕಟ್ಟಡದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು..!

- Advertisement -
- Advertisement -

ವಿಜಯಪುರ: ಕಾರ್ಮಿಕನೋರ್ವ ಆಯತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಕೂಡಗಿ ಬಳಿಯಿರುವ ಎನ್ ಟಿಪಿಸಿ ಘಟಕದಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಮೃತಪಟ್ಟ ಕಾರ್ಮಿಕ ಕಿಶನ್ ಕುಮಾರ್ ಭಾರಧ್ವಾಜ್ (33) ಎಂದು ಗುರುತಿಸಲಾಗಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಕಿಶನ್ ಕುಮಾರ್ ಭಾರಧ್ವಾಜ್ ಎನ್​ಟಿಪಿಸಿ ಘಟಕದಲ್ಲಿ ಹೆಲ್ಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದನು. ವಿಜಯಪುರ ಖಾಸಗಿ ಆಸ್ಪತ್ರೆಗೆ ಕಾರ್ಮಿಕನ ಮೃತ ದೇಹ ರವಾನಿಸಲಾಗಿದೆ.

ಇನ್ನು ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಎನ್ ಟಿಪಿಸಿ ಘಟಕದ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ. ಬೆಳಿಗ್ಗೆಯಿಂದಲೇ ಕೂಡಗಿ ಎನ್‌ಟಿ ಪಿಸಿ ಘಟಕದ ಎದುರು ಕಾರ್ಮಿಕರು ಪ್ರತಿಭಟಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!