Sunday, June 29, 2025
spot_imgspot_img
spot_imgspot_img

ಇಂದು ಹೈಕೋರ್ಟ್‌ಗೆ ಸಿ ಎಂ ಸಿದ್ದರಾಮಯ್ಯ ಪರ ವಕೀಲರಿಂದ ರಿಟ್ ಅರ್ಜಿ

- Advertisement -
- Advertisement -

ಮುಡಾ ಹಗರಣ ಸಂಬಂಧ ಸಿ ಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕುರಿತು ಅವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಭಾನುವಾರವೂ ಸಚಿವರು, ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ ಸಿಎಂ ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್‌ನಲ್ಲಿಂದು ಅರ್ಜಿ ಸಲ್ಲಿಸಲಿದ್ದಾರೆ.

ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕೂಡ ಚಿಂತನೆ ನಡೆದಿತ್ತು. ಈ ಮೂಲಕ ರಾಷ್ಟ್ರಮಟ್ಟದಲ್ಲೂ ರಾಜ್ಯಪಾಲರ ನಡೆ ಪ್ರತಿಧ್ವನಿಸುವಂತೆ ಮಾಡಿದರೆ, ರಾಜಕೀಯವಾಗಿ ಅನುಕೂಲವಾಗುತ್ತದೆಂಬ ಲೆಕ್ಕಾಚಾರವಿತ್ತು. ಆದರೆ, ಸುಪ್ರೀಂ ಮೊರೆ ಹೋದರೆ, ಪ್ರಕರಣ ಹೈಕೋರ್ಟ್‌ಗೆ ವರ್ಗಾವಣೆಯಾಗಬಹುದು ಎಂದು ವಕೀಲರು ಸಲಹೆ ನೀಡಿದ್ದಾರೆ. ಹೀಗಾಗಿ ಹೈಕೋರ್ಟ್‌ನಲ್ಲೇ ಇಂದು ರಿಟ್ ಅರ್ಜಿ ಸಲ್ಲಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಲು ಹಿರಿಯ ವಕೀಲರಾದ ಅಭಿಷೇಕ್ ಸಿಂಘ್ವಿ ಮತ್ತು ಕಪಿಲ್ ಸಿಬಲ್ ಇಂದು ಬೆಂಗಳೂರಿಗೆ ಆಗಮಿಸ್ತಿದ್ದಾರೆ. ಹೀಗಾಗಿ ಇಂದು ಮಂತ್ರಾಲಯ ಪ್ರವಾಸ ಕೈಗೊಳ್ಳಬೇಕಿದ್ದ ಸಿಎಂ ಬೆಂಗಳೂರಿನಲ್ಲೇ ಉಳಿಯಲಿದ್ದಾರೆ.

- Advertisement -

Related news

error: Content is protected !!