Saturday, July 25, 2026
spot_imgspot_img
spot_imgspot_img

ಯಾದಗಿರಿ: ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು!

- Advertisement -
- Advertisement -

ಯಾದಗಿರಿ: ಖಾಸಗಿ ಶಾಲಾ ಬಸ್ ಹರಿದು 4ರ ಬಾಲಕ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ. ಪುನೀತ್ (4) ಮೃತ ದುರ್ದೈವಿ ಬಾಲಕ. ಗಾಜರಕೋಟ್ ಗ್ರಾಮದಲ್ಲಿರುವ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ.

ಗ್ರಾಮದ ವಿದ್ಯಾರ್ಥಿಗಳನ್ನು ಶಾಲಾ ಬಸ್ ಪ್ರತಿನಿತ್ಯ ಸ್ಕೂಲ್‌ಗೆ ಕರೆದೊಯ್ದು ತಂದು ಬಿಡಲಾಗುತ್ತಿತ್ತು. ಅದರಂತೆ ಎಂದಿನಂತೆ ಬಸ್ ವಿದ್ಯಾರ್ಥಿಗಳನ್ನು ಬಿಡಲು ಗ್ರಾಮಕ್ಕೆ ಬಂದಿತ್ತು. ಬಾಲಕ ಬಸ್ಸಿನಿಂದ ಇಳಿದ ಬಳಿಕ ಬಸ್ ರಿವರ್ಸ್ ತೆಗೆದುಕೊಳ್ಳಲು ಮುಂದಾಗಿತ್ತು. ಈ ವೇಳೆ ಹಿಂದೆ ನೋಡದೇ ಚಾಲಕ ರಿವರ್ಸ್ ತೆಗೆದುಕೊಂಡಿದ್ದು, ಬಾಲಕನ ಮೇಲೆ ಹರಿದಿದೆ. ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ. ಗ್ರಾಮದಲ್ಲಿ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!