Friday, March 29, 2024
spot_imgspot_img
spot_imgspot_img

ಕೊರೋನ ಸೋಂಕು ಹೆಚ್ಚಳ ಹಿನ್ನೆಲೆ- ಇಂದು ಸಚಿವರೊಂದಿಗೆ ಸಿಎಂ ತುರ್ತು ಸಭೆ

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರು ಸಚಿವರುಗಳ ಸಭೆ ಕರೆದಿದ್ದಾರೆ. ಇಂದು ಸಂಜೆ 5ಕ್ಕೆ ಅವರ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದೆ.

ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಇಂದು ನಡೆಯಲಿರುವ ಸಭೆಯಲ್ಲಿ ಗೃಹ ಸಚಿವರು, ಕಂದಾಯ ಸಚಿವರು ಮತ್ತು ಶಿಕ್ಷಣ ಸಚಿವರು ಮತ್ತು ನಾನು ಈ ವಿಷಯವನ್ನು ಮುಖ್ಯಮಂತ್ರಿಯೊಂದಿಗೆ ಚರ್ಚಿಸುತ್ತೇನೆ. ವಿಧಿಸಲಾಗಿರುವ ಲಾಕ್‌ಡೌನ್ ಬಗ್ಗೆ ನಮಗೆ ತಿಳಿದಿದೆ. ನಾವು ಎಲ್ಲ ವಿಷಯಗಳ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸುತ್ತೇವೆ.

“ನಾಲ್ಕು ವಾರಗಳಿಂದ 300 ಹೊಸ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಆದರೆ, ಈ ಪ್ರಕರಣಗಳು 3,000ರವರೆಗೆ ತಲುಪಿದೆ. ನಾವು ತೆಗೆದುಕೊಂಡ ಕ್ರಮವು ಸಾಕಾಗುವುದಿಲ್ಲ. ರಾಜ್ಯದ ಗಡಿಗಳಲ್ಲಿ ಮತ್ತು ಆಗಮಿಸುವವರ ಮೇಲೆ ನಾವು ಕಠಿಣ ನಿಯಮಗಳನ್ನು ಕೈಗೊಳ್ಳಬೇಕಾಗಿದೆ. ನಾನು ಈ ವಿಷಯವನ್ನು ಗೃಹ ಸಚಿವರೊಂದಿಗೆ ಚರ್ಚಿಸಿದ್ದೇನೆ. ಇದನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರುತ್ತೇವೆ ಎಂದರು.

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ನ ಎರಡನೇ ತರಂಗ ಸೋಂಕುಗಳು ಹೆಚ್ಚುತ್ತಿವೆ. ನಮ್ಮ ರಾಜ್ಯದ ಆಸ್ಪತ್ರೆಗಳಲ್ಲಿಯೂ ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮುಂದಿನ ಆರರಿಂದ ಎಂಟು ವಾರಗಳವರೆಗೆ ಅಗತ್ಯ ಕ್ರಮಗಳನ್ನು ಜಾರಿಗೆ ತರಬೇಕಾಗಿದೆ. ತಾಂತ್ರಿಕ ಸಲಹಾ ಸಮಿತಿಯಿಂದಲೂ ನಮಗೆ ವರದಿಗಳು ಬಂದಿವೆ ಎಂದಿದ್ದಾರೆ.

- Advertisement -

Related news

error: Content is protected !!