- Advertisement -
- Advertisement -
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಸಂಜೆ ತಿರುಪತಿಗೆ ಭೇಟಿ ನೀಡಲಿದ್ದಾರೆ. ಸಂಜೆ ಬೆಂಗಳೂರಿನಿಂದ ತಿರುಪತಿಗೆ ತೆರಳಲಿರುವ ಯಡಿಯೂರಪ್ಪ ರಾತ್ರಿ ಅಲ್ಲಿ ತಂಗಲಿದ್ದಾರೆ. ನಾಳೆ ಮುಂಜಾನೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ತಿರುಪತಿಯಲ್ಲಿ ರಾಜ್ಯ ಸರ್ಕಾರ ನಿರ್ಮಿಸುತ್ತಿರುವ ಕರ್ನಾಟಕ ಭವನದ ಭೂಮಿ ಪೂಜೆಯಲ್ಲಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
- Advertisement -