- Advertisement -
- Advertisement -





ಬಂಟ್ವಾಳ: ತಾಲೂಕಿನ ಮುಡಿಪು ಇರಾ ನಿವಾಸಿ, ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ (68) ಅಲ್ಪ ಕಾಲದ ಅಸೌಖ್ಯದಿಂದ ಡಿ.14ರಂದು ನಿಧನರಾದರು.
ಶ್ರೀಧರ ರೈ ಅವರು ಕೊಲ್ಲೂರು ಮೇಳ, ಸುಂಕದಕಟ್ಟೆ ಮೇಳ, ಭಗವತೀ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಪುಂಡು ವೇಷ, ರಾಜ ವೇಷ, ಬಣ್ಣದ ವೇಷಧಾರಿಯಾಗಿ ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
- Advertisement -








