- Advertisement -
- Advertisement -
ಆಸ್ಪತ್ರೆಗೆ ಹೋಗಲು ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಯಮಸ್ವರೂಪಿ ಲಾರಿಯೊಂದು ಹರಿದ ಪರಿಣಾಮ ಭೀಕರವಾಗಿ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಹೊಸೂರು ರಸ್ತೆಯ ಬೊಮ್ಮಸಂದ್ರದ ಬಳಿ ನಡೆದಿದೆ.
ನಾರಾಯಣ ಹೃದಯಾಲಯ ಆಸ್ಪತ್ರೆ ಮುಂಭಾಗದಲ್ಲಿ ಇಬ್ಬರು ಮಹಿಳೆಯರ ರಸ್ತೆ ದಾಟುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಲಾರಿ ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೇ ಲಾರಿಯ ಚಕ್ರಗಳು ಮಹಿಳೆಯರ ದೇಹದ ಮೇಲೆ ಹರಿದಿವೆ. ಪರಿಣಾಮ ಮಹಿಳೆಯರ ದೇಹಗಳು ಛಿದ್ರಗೊಂಡಿವೆ.
ಈ ಮಹಿಳೆಯರು ವೈಟ್ ಫೀಲ್ಡ್ ನಿಂದ ಬಂದಿದ್ದರೆಂದು ಪ್ರಾಥಮಿಕವಾಗಿ ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅದಾದ ಬಳಿಕ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
- Advertisement -