- Advertisement -
- Advertisement -
ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ ಬೆನ್ನಲೆ ಬಿಜೆಪಿ ಪ್ರತಿಭಟನೆ ನಡೆಸಿದೆ.
ಸರಕಾರದ ವಿರುದ್ಧ ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಹಿರಿಯ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಬಸನ ಗೌಡ ಪಾಟೀಲ್ ಯತ್ನಾಳ್ ಅವರ ಪತ್ನಿ ಶೈಲಜಮ್ಮ, ಪುತ್ರ ಹರ್ಷ ಅವರು ಆಸ್ಪತ್ರೆಗೆ ಆಗಮಿಸಿದ್ದು, ಬಿಪಿ ಸಮಸ್ಯೆಯಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
- Advertisement -