Sunday, June 29, 2025
spot_imgspot_img
spot_imgspot_img

ಕಾಸರಗೋಡು: ಇಂದು ಯೋಗಿ ಆದಿತ್ಯನಾಥ್ ಭೇಟಿ

- Advertisement -
- Advertisement -

ಕಾಸರಗೋಡು: ಕೇರಳ ಬಿಜೆಪಿ ಘಟಕ ಹಮ್ಮಿಕೊಂಡಿರುವ ವಿಜಯ ಯಾತ್ರೆ ಇಂದು ಆರಂಭವಾಗಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯಾತ್ರೆ ಉದ್ಘಾಟಿಸಲಿದ್ದಾರೆ.

ಕಾಸರಗೋಡಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್ ಅವರು ಯಾತ್ರೆ ಉದ್ಘಾಟಿಸಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆ ಗಮನದಲ್ಲಿರಿಸಿ ಬಿಜೆಪಿ ಈ ಯಾತ್ರೆ ಹಮ್ಮಿಕೊಂಡಿದೆ. ತಿರುವನಂತಪುರಂ ತನಕ ಯಾತ್ರೆ ಸಂಚರಿಸಲಿದೆ. ಬಿಜೆಪಿ ಸಮಾವೇಶದ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!