- Advertisement -
- Advertisement -
ಧಾರವಾಡ: ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನ ನಡೆಸುತ್ತಿರುವ ಸಿಬಿಐ ಕೆಲವರನ್ನ ಸುಳ್ಳು ಪತ್ತೆ (ಪಾಲಿಗ್ರಫಿ) ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದೆ.
ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಗುವ ನಿರೀಕ್ಷೆ ಇದೆ.ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ, ವಿಜಯ ಜೊತೆ ಸೋದರಮಾವ ಚಂದ್ರಶೇಖರ್ ಇಂಡಿ, ಸೋಮು ನ್ಯಾಮಗೌಡ ಕೂಡ ಇಂದು ಕೋರ್ಟ್ಗೆ ಹಾಜರಾಗಿದ್ದಾರೆ. ಸಿಬಿಐ ವಿಶೇಷ ಕೋರ್ಟ್ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಈ ಮೂವರನ್ನ ಸುಳ್ಳು ಪತ್ತೆ (ಪಾಲಿಗ್ರಫಿ) ಪರೀಕ್ಷೆಗಾಗಿ ಸಿಬಿಐ ಕೋರ್ಟ್ ಬಳಿ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಖುದ್ದು ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿತ್ತು. ಅದರಂತೆ ಮೂವರೂ ಕೋರ್ಟ್ಗೆ ಹಾಜರಾಗಿದ್ದಾರೆ.
- Advertisement -