Saturday, April 20, 2024
spot_imgspot_img
spot_imgspot_img

ಯೋಗೀಶ್​ ಗೌಡ ಕೊಲೆ ಪ್ರಕರಣ- ಮಾಜಿ ಸಚಿವ ವಿನಯ್​​ ಕುಲಕರ್ಣಿ ಜಾಮೀನು ಅರ್ಜಿ ವಜಾ!

- Advertisement -G L Acharya panikkar
- Advertisement -

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್​ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್​​ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರವಾಡ ಹೈ ಕೋರ್ಟ್​​ ವಜಾಗೊಳಿಸಿದೆ.

ಧಾರವಾಡ ವಿಶೇಷ ಸಿಬಿಐ ನ್ಯಾಯಾಲಯ ವಿನಯ್​​ ಕುಲಕರ್ಣಿ ಅರ್ಜಿಯನ್ನು ವಜಾ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ವಿನಯ್​ ಕುಲಕರ್ಣಿ ಪರ ವಕೀಲರು ಧಾರವಾಡ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.

ನಿನ್ನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಅರ್ಜಿಯನ್ನು ವಜಾಗೊಳಿಸಿದೆ. ಸದ್ಯ ಮಾಜಿ ಸಚಿವ ವಿನಯ್​​ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದಾರೆ.

- Advertisement -

Related news

error: Content is protected !!